Select Your Language

Notifications

webdunia
webdunia
webdunia
webdunia

ಹೈಕಮಾಂಡ್‌ಗೆ ಕಾಂಗ್ರೆಸ್ ಕಾರ್ಯಕರ್ತರ ದೂರು

ಹೈಕಮಾಂಡ್‌ಗೆ ಕಾಂಗ್ರೆಸ್ ಕಾರ್ಯಕರ್ತರ ದೂರು

geetha

bangalore , ಶುಕ್ರವಾರ, 12 ಜನವರಿ 2024 (18:46 IST)
ಬೆಂಗಳೂರು : ಹೈಕಮಾಂಡ್‌ಗೆ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ.. ಸಹಕಾರ ಸಚಿವ ಕೆ.ಎನ್​.ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ದೂರು ನೀಡಿದ್ದಾರೆ. ಅಲ್ಲದೇ ಸಚಿವ ಕೆಎನ್​​ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿದ್ದಾರೆ. ಸಚಿವ ಕೆಎನ್​ ರಾಜಣ್ಣ ಅವರು ಪದೇ ಪದೇ ಎಐಸಿಸಿ ಅಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧ ಮಾತಾಡುತ್ತಿದ್ದಾರೆ.

ಸಚಿವ ಕೆಎನ್​ ರಾಜಣ್ಣ ಅನಾವಶ್ಯಕವಾಗಿ ಡಿಸಿಎಂ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಎನ್​.ರಾಜಣ್ಣ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ಸಚಿವರ ಡಿನ್ನರ್ ಮೀಟಿಂಗ್​ ಬಗ್ಗೆ ತಪ್ಪು ಸಂದೇಶವನ್ನು ರವಾನಿಸುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಚಟುವಟಿಕೆಗಳನ್ನು ಸಹಿಸಬಾರದು. ಸಂಪುಟದಿಂದ ಸಚಿವ ಕೆ.ಎನ್.ರಾಜಣ್ಣ ಅವರನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕೂಡ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದೆ ಎಂದು ಕಾಂಗ್ರೆಸ್​​ನ 10 ಕಾರ್ಯಕರ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರದಲ್ಲೇ ಮಹಿಳೆಯರಿಗಾಗಿ ಮತ್ತೊಂದು ಕೋಚ್