Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಪತ್ನಿಗೆ ಅರಿಶಿನ ಕುಂಕುಮ ಎಂದು ಕೊಟ್ಟಿದ್ದ ಸೈಟಿನಲ್ಲೂ ವಿವಾದ: ದೂರು

Krishnaveni K
ಬುಧವಾರ, 27 ನವೆಂಬರ್ 2024 (12:47 IST)
ಬೆಂಗಳೂರು: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಹೋದರ ಅರಿಶಿನ ಕುಂಕುಮ ರೂಪದಲ್ಲಿ ನೀಡಿದ್ದ ಸೈಟು ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಮೈಸೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಅರಿಶಿನ ಕುಂಕುಮ ರೂಪದಲ್ಲಿ ಮೈಸೂರಿನ ಕೆಸರೆ ಭಾಗದಲ್ಲಿ ಮೂರೂವರೆ ಎಕರೆ ಜಮೀನು ನೀಡಿದ್ದರು. ಇದೇ ಜಮೀನಿನ ಬದಲಿಗೆ ಮುಡಾದವರು 14 ಸೈಟು ನೀಡಿದ್ದು ಅಕ್ರಮ ಎಂದು ಈಗ ವಿಚಾರಣೆ ನಡೆಯುತ್ತಿದೆ.

ಅದರ ನಡುವೆ ಈ ಸೈಟಿಗೆ ಸಂಬಂಧಪಟ್ಟಂತೆ ಮತ್ತೊಂದು ದೂರು ದಾಖಲಾಗಿದೆ. ಮಲ್ಲಿಕಾರ್ಜುನ ಸ್ವಾಮಿಗೆ ಈ ಸೈಟ್ ನ್ನು ದೇವರಾಜ್ ಎಂಬವರು ಮಾರಿದ್ದರು. ಆದರೆ ಆ ಜಮೀನು ದೇವರಾಜ್ ಅವರದ್ದಲ್ಲ, ನಮ್ಮದು ಎಂದು ದೇವರಾಜ್ ಸಹೋದರ ಮೈಲಾರಯ್ಯನ ಮಗಳು ಜಮುನಾ ಎಂಬವರು ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ನಮ್ಮ ಚಿಕ್ಕಪ್ಪ ದೇವರಾಜ್ ನಮ್ಮ ತಂದೆಯ ಭಾಗವನ್ನೂ ಮೋಸದಿಂದ ಬರೆಯಿಸಿಕೊಂಡು ನಮಗೆ ಮೋಸ ಮಾಡಿದ್ದಾರೆ. ಈ ವಿಚಾರ ನಮಗೆ ಈಗ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಖಾತೆ ಮಾಡಿಸಿಕೊಡುವುದಾಗಿ ಹೇಳಿ ತಂದೆಯವರ ಸಹಿ ಪಡೆದುಕೊಂಡಿದ್ದಾರೆ. ಹೀಗಾಗಿ ನ್ಯಾಯಾಲಯಕ್ಕೆ ದೂರು ನೀಡಿರುವುದಾಗಿ ಜಮುನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments