Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪ ಅವರ ಪುತ್ರ ಹಾಗು ಸೊಸೆ ವಿರುದ್ದ ಎಸಿಬಿ ಕೇಂದ್ರ ಕಚೇರಿಗೆ ದೂರು!

Webdunia
ಗುರುವಾರ, 15 ಮಾರ್ಚ್ 2018 (11:35 IST)
ಶಿವಮೊಗ್ಗ : ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಹಾಗು ಸೊಸೆ ಶಾಲಿನಿ ನಿರ್ದೇಶಕರಾಗಿರುವ  ಕಂಪೆನಿಯೊಂದರ ಮೂಲಕ ಅಕ್ರಮವಾಗಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿದೆ ಎಂದು ವಕೀಲರಾದ ಆರ್  ಟಿಐ ಕಾರ್ಯಕರ್ತ ವಿನೋದ್ ಅವರು ಬೆಂಗಳೂರಿನಲ್ಲಿರುವ ಎಸಿಬಿ ಕೇಂದ್ರ ಕಚೇರಿಗೆ ದೂರು ನೀಡಿದ್ದಾರೆ.


ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್, ಸೊಸೆ ಶಾಲಿನಿ ನಿರ್ದೇಶಕರಾಗಿರುವ ಭರಣಿ ಪವರ್ ಪ್ರೈವೆಟ್ ಲಿಮಿಟೆಡ್ ಕಂಪೆನಿ 2010ರಲ್ಲಿ ಕಂಪೆನಿ ಕಾಯ್ದೆ ಅನುಸಾರ ನೋಂದಣಿ ಆಗಿದ್ದು, ಇದು 2,76,250 ಷೇರುಗಳನ್ನು ಹೊಂದಿತ್ತು. ಆದರೆ 10 ರೂಪಾಯಿ ಮುಖಬೆಲೆಯ ಈ ಷೇರುಗಳನ್ನು 190 ರೂಪಾಯಿ ಪ್ರೀಮಿಯಂ ಮೊತ್ತ ಸೇರಿಸಿ 200 ರೂ.ಗೆ ಮಾರಾಟ ಮಾಡಿದ್ದಾರೆ. ಪಶ್ಚಿಮ ಬಂಗಾಳದ 9 ನಕಲಿ ಕಂಪೆನಿಗಳು ಈ ಷೇರುಗಳನ್ನು ಖರೀದಿಸಿ ಲಾಭ ಗಳಿಸಿವೆ ಈ ಕುರಿತು ತನಿಖೆ ನಡೆಸಬೇಕೆಂದು ಆರ್  ಟಿಐ ಕಾರ್ಯಕರ್ತ ವಿನೋದ್ ಅವರು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಹಾಗು ಸೊಸೆ ಶಾಲಿನಿ ವಿರುದ್ದ ಎಸಿಬಿ ಕೇಂದ್ರ ಕಚೇರಿಗೆ ದೂರು ನೀಡಿದ್ದಾರೆ. ಈ ದೂರನ್ನು ಈಗ ಪೂರ್ವ ವಲಯ ಎಸಿಬಿ ಎಸ್ಪಿ ಕಚೇರಿಗೆ ವರ್ಗಾಯಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments