Webdunia - Bharat's app for daily news and videos

Install App

ವಂಚನೆ ಸಂಬಂಧ ಪೊಲೀಸ್ ಠಾಣೆಗೆ ದೂರು..!

Webdunia
ಭಾನುವಾರ, 15 ಆಗಸ್ಟ್ 2021 (21:55 IST)
ವಂಚನೆ ಸಂಬಂಧ ದೂರು ನೀಡಿದ್ದಕ್ಕೆ ನಿವೃತ್ತ ಸರಕಾರಿ ಅಧಿಕಾರಿ ಕುಟುಂಬದ ಮಹಿಳೆ ಸೇರಿ ಕೆಲ ಸದಸ್ಯರು ಯುವ ವಕೀಲನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಗಡೆ ನಗರ ನಿವಾಸಿ ಎಂ.ಎಲ್.ರೆಹಮಾನ್ ಹಲ್ಲೆಗೊಳಗಾದ ಯುವ ವಕೀಲ.  ಈ ಸಂಬಂಧ ಪಕ್ಕದ ಮನೆ ನಿವಾಸಿ ಹಾಗೂ ಕಾರ್ಮಿಕ ಆಯೋಗದ ನಿವೃತ್ತ ಆಯಕ್ತ ಸಮೀವುಲ್ಲಾ ಷರೀಫ್ ಹಾಗೂ ಅವರ ಕುಟುಂಬ ಸದಸ್ಯರಾದ ಅಲ್ತಾಫ್, ಅಜ್ಮಲ್, ಮತ್ತು ಆಯಿಷಾ ಷರೀಫ್ ಎಂಬುವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹಲ್ಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ಹೇಳಿದರು.
ಏನಿದು ಘಟನೆ?
ವೃತ್ತಿಯಲ್ಲಿ ವಕೀಲರಾಗಿರುವ ರೆಹಮಾನ್ ತಾಯಿಗೆ ಯಾಮಾರಿಸಿ ನೆರೆ ಮನೆಯ ಸಮೀವು¯್ಲÁ ನಿವೇಶನ ಲಪಟಾಯಿಸಿದ್ದ. ಈ ಕುರಿತಂತೆ ಆತನ ವಿರುದ್ಧ ರೆಹಮಾನ್ ಲೋಕಾಯುಕ್ತಕ್ಕೆ ದೂರು ನೀಡಿದ್ದ. ಕೆಲ ದಿನಗಳ ಹಿಂದೆ ರೆಹಮಾನ್ ತನ್ನ ಮನೆಯ ಮೇಲ್ಭಾಗದಲ್ಲಿ ಕೊಠಡಿ ನಿರ್ಮಾಣ ಕಾರ್ಯ ಆರಂಭಿಸಿದ್ದ. ನಮ್ಮ ಮನೆಯ ಕಟ್ಟಡದ ಗೋಡೆಯಿಂದ 6 ಇಂಚು ಅಂತರ ಕಾಪಾಡುವಂತೆ ಸಮೀವು¯್ಲÁ ರೆಹೆಮಾನ್‍ಗೆ ಹೇಳಿದನಂತೆ. ಇದಕ್ಕೆ ತನ್ನ ತಂದೆ-ತಾಯಿ ಜತೆ ಮಾತನಾಡುವಂತೆ ರೆಹಮಾನ್ ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಷರೀಫ್ ರೆಹಮನ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದ. ಹಲ್ಲೆಗೊಳಗಾದ ವ್ಯಕ್ತಿ ತನ್ನ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ಈ ಬಗ್ಗೆ ದೂರು ಕೊಡಲು ನಿಶ್ಚಯಿಸಿದ್ದರು. 
ಮೊದಲೇ ಹಗೆ ಸಾಧಿಸುತ್ತಿದ್ದ ಅಲ್ತಾಫ್ ಆ.3ರಂದು ಮನೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬಂದು ರೆಹಮಾನ್ ಮೇಲೆ ಹಲ್ಲೆ ನಡೆಸಲು ಮುಂದಾಗುತ್ತಾನೆ. ಈ ವೇಳೆ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಂಡರೂ ಬಿಡದೆ ರೆಹಮಾನ್‍ನನ್ನು ಹೊರಗೆಳೆದುಕೊಂಡು ಬಂದು ಅಜ್ಮಲ್, ಷರೀಫ್, ಆಯೇಷಾ ಷರೀಫ್ ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಆರೊಪಿಗಳು ಯುವಕನಿಗೆ ಹಲ್ಲೆ ನಡೆಸಿರುವ ದೃಶ್ಯ ಸ್ಥಳೀಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
 ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿ ಠಾಣಾ ಜಾಮೀನು ನೀಡಿ ಕಳುಹಿಸಲಾಗಿದೆ ಎಂದು ಪೆÇಲೀಸರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments