Webdunia - Bharat's app for daily news and videos

Install App

ವಂಚನೆ ಸಂಬಂಧ ಪೊಲೀಸ್ ಠಾಣೆಗೆ ದೂರು..!

Webdunia
ಭಾನುವಾರ, 15 ಆಗಸ್ಟ್ 2021 (21:55 IST)
ವಂಚನೆ ಸಂಬಂಧ ದೂರು ನೀಡಿದ್ದಕ್ಕೆ ನಿವೃತ್ತ ಸರಕಾರಿ ಅಧಿಕಾರಿ ಕುಟುಂಬದ ಮಹಿಳೆ ಸೇರಿ ಕೆಲ ಸದಸ್ಯರು ಯುವ ವಕೀಲನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಗಡೆ ನಗರ ನಿವಾಸಿ ಎಂ.ಎಲ್.ರೆಹಮಾನ್ ಹಲ್ಲೆಗೊಳಗಾದ ಯುವ ವಕೀಲ.  ಈ ಸಂಬಂಧ ಪಕ್ಕದ ಮನೆ ನಿವಾಸಿ ಹಾಗೂ ಕಾರ್ಮಿಕ ಆಯೋಗದ ನಿವೃತ್ತ ಆಯಕ್ತ ಸಮೀವುಲ್ಲಾ ಷರೀಫ್ ಹಾಗೂ ಅವರ ಕುಟುಂಬ ಸದಸ್ಯರಾದ ಅಲ್ತಾಫ್, ಅಜ್ಮಲ್, ಮತ್ತು ಆಯಿಷಾ ಷರೀಫ್ ಎಂಬುವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹಲ್ಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ಹೇಳಿದರು.
ಏನಿದು ಘಟನೆ?
ವೃತ್ತಿಯಲ್ಲಿ ವಕೀಲರಾಗಿರುವ ರೆಹಮಾನ್ ತಾಯಿಗೆ ಯಾಮಾರಿಸಿ ನೆರೆ ಮನೆಯ ಸಮೀವು¯್ಲÁ ನಿವೇಶನ ಲಪಟಾಯಿಸಿದ್ದ. ಈ ಕುರಿತಂತೆ ಆತನ ವಿರುದ್ಧ ರೆಹಮಾನ್ ಲೋಕಾಯುಕ್ತಕ್ಕೆ ದೂರು ನೀಡಿದ್ದ. ಕೆಲ ದಿನಗಳ ಹಿಂದೆ ರೆಹಮಾನ್ ತನ್ನ ಮನೆಯ ಮೇಲ್ಭಾಗದಲ್ಲಿ ಕೊಠಡಿ ನಿರ್ಮಾಣ ಕಾರ್ಯ ಆರಂಭಿಸಿದ್ದ. ನಮ್ಮ ಮನೆಯ ಕಟ್ಟಡದ ಗೋಡೆಯಿಂದ 6 ಇಂಚು ಅಂತರ ಕಾಪಾಡುವಂತೆ ಸಮೀವು¯್ಲÁ ರೆಹೆಮಾನ್‍ಗೆ ಹೇಳಿದನಂತೆ. ಇದಕ್ಕೆ ತನ್ನ ತಂದೆ-ತಾಯಿ ಜತೆ ಮಾತನಾಡುವಂತೆ ರೆಹಮಾನ್ ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಷರೀಫ್ ರೆಹಮನ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದ. ಹಲ್ಲೆಗೊಳಗಾದ ವ್ಯಕ್ತಿ ತನ್ನ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ಈ ಬಗ್ಗೆ ದೂರು ಕೊಡಲು ನಿಶ್ಚಯಿಸಿದ್ದರು. 
ಮೊದಲೇ ಹಗೆ ಸಾಧಿಸುತ್ತಿದ್ದ ಅಲ್ತಾಫ್ ಆ.3ರಂದು ಮನೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬಂದು ರೆಹಮಾನ್ ಮೇಲೆ ಹಲ್ಲೆ ನಡೆಸಲು ಮುಂದಾಗುತ್ತಾನೆ. ಈ ವೇಳೆ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಂಡರೂ ಬಿಡದೆ ರೆಹಮಾನ್‍ನನ್ನು ಹೊರಗೆಳೆದುಕೊಂಡು ಬಂದು ಅಜ್ಮಲ್, ಷರೀಫ್, ಆಯೇಷಾ ಷರೀಫ್ ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಆರೊಪಿಗಳು ಯುವಕನಿಗೆ ಹಲ್ಲೆ ನಡೆಸಿರುವ ದೃಶ್ಯ ಸ್ಥಳೀಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
 ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿ ಠಾಣಾ ಜಾಮೀನು ನೀಡಿ ಕಳುಹಿಸಲಾಗಿದೆ ಎಂದು ಪೆÇಲೀಸರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments