ಹೂವು ಸರಿಯಾಗಿ ಅಳತೆ ಕೊಡ್ತಿಲ್ಲ ಅಂತ ಸಿಎಂಗೆ ದೂರು ಕೊಟ್ರು: ಮುಂದೇನಾಯ್ತು?

Webdunia
ಶುಕ್ರವಾರ, 24 ಆಗಸ್ಟ್ 2018 (17:32 IST)
ಹೂವಿನ ಬೆಳೆಗಾರರು ಮತ್ತು ವ್ಯಾಪಾರಿಗಳ ಮಧ್ಯೆ  ಹೂವಿನ ಅಳತೆಯಲ್ಲಿ  ಏರುಪೇರು ಉಂಟಾಗಿದೆ. ಹೀಗಾಗಿ ನೊಂದವರು ಮುಖ್ಯಮಂತ್ರಿಗೆ ದೂರು ಸಲ್ಲಿಸಿದ್ದರು. ಆ ದೂರು ಮುಂದೆ ಯಾವ ಯಾವ ಹಂತ ತಲುಪುತ್ತಿದೆ ಅನ್ನೋದನ್ನು ತಿಳಿಯಲು ಮುಂದೆ ಓದಿ…

ಹೂವಿನ ಬೆಳೆಗಾರರು ಮತ್ತು ವ್ಯಾಪಾರಿಗಳ ಮಧ್ಯೆ  ಹೂವಿನ ಅಳತೆಯಲ್ಲಿ  ಏರುಪೇರು ಉಂಟಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ  ಹಿರಿಯೂರು ತಹಶೀಲ್ದಾರ್ ಜೆ.ಸಿ ವೆಂಕಟೇಶಯ್ಯ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ಚಿತ್ರದುರ್ಗ ನಗರದ ನೆಹರು ಹೂವಿನ ಮಾರುಕಟ್ಟೆಗೆ ಭೇಟಿ ನೀಡಿ ತಪಾಸಣೆ ನಡೆಸಿದರು.  ಹೂವಿನ ವ್ಯಾಪಾರಿಗಳಿಗೆ ಸಂಪ್ರಾಯಿಕ ಕೈ ಅಳತೆ  ಬಿಟ್ಟು ವೈಜ್ಞಾನಿಕ  ಮೀಟರ್  ಅಳತೆ ಪಟ್ಟಿಯಲ್ಲಿ ಹೂವು ಅಳತೆ ಮಾಡಲು ಜಾಗೃತಿ ಮೂಡಿಸಿದರು.
ತಹಶೀಲ್ದಾರ್ ಜೆ.ಸಿ ವೆಂಕಟೇಶಯ್ಯ ಮಾತನಾಡಿ,  ಇಂದಿನಿಂದಲೇ ಮೀಟರ್ ಅಳತೆಯಲ್ಲಿ  ಹೂವು ಮಾರಲು ಸೂಚಿಸಿದರು. ಒಂದು ವೇಳೆ ಮೀಟರ್ ಬಳಸದೆ ಇದ್ದಲ್ಲಿ ಹೂವಿನ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿ ಮಂಜುನಾಥ್ ಮಾನತಾಡಿ, ಕಟ್ಟಿದ ಹೂವುವನ್ನು ಮೀಟರ್ ಅಳತೆಯಲ್ಲಿ ಮತ್ತು ಬಿಡಿ ಹೂವುಗಳನ್ನು ತೂಕದ ಲೆಕ್ಕದಲ್ಲಿ ವ್ಯವಹರಿಸುವಂತೆ ಸೂಚಿಸಿದರು. ಇದಕ್ಕೆ ಸಂಬಂಧಿಸಿದಂತೆ ಇಬ್ಬರ ಹೂವಿನ ವ್ಯಾಪಾರಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments