Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರಕ್ಕೆ ಜನರ ಸಮಸ್ಯೆಗಿಂತ ಬಿಜೆಪಿ ವಿರುದ್ಧ ದೂರು ನೀಡುವುದೇ ಮುಖ್ಯ: ಕುಮಾರಸ್ವಾಮಿ ಆಕ್ರೋಶ

HD Kumaraswamy

sampriya

ಮೈಸೂರು , ಗುರುವಾರ, 23 ಮೇ 2024 (16:44 IST)
ಮೈಸೂರು: ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಳೆದ ವಾರ ಸುರಿದ ಭಾರಿ ಮಳೆಗೆ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ವಾರ ಸುರಿದ ಭಾರೀ ಮಳೆಗೆ ಮೈಸೂರು, ಚಿತ್ರದುರ್ಗ, ವಿಜಯಪುರ, ತುಮಕೂರು, ಧಾರವಾಡ ಜಿಲ್ಲೆಗಳಲ್ಲಿ ತೀವ್ರ ಬೆಳೆ ಹಾನಿಯಾಗಿದ್ದು, ರಾಜ್ಯ ಸರ್ಕಾರ ಮಾತ್ರ ಯಾವುದೇ ಸಹಕಾರ ನೀಡದೆ ಕೇವಲ ಹೇಳಿಕೆಗಳನ್ನೇ ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗಾಗಲೀ ಅಥವಾ ಸಚಿವ ಸಂಪುಟದಲ್ಲಿರುವವರಿಗಾಗಲೀ ಯಾರಿಗೂ ಕಾಳಜಿ ಇಲ್ಲ.

ಸದ್ಯ ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದೂರು ನೀಡುವುದು ಅಥವಾ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷ ಸೃಷ್ಟಿಸುವುದು ಬಿಟ್ಟರೆ ಈ ಸರ್ಕಾರ ಏನನ್ನೂ ಸಾಧಿಸಿಲ್ಲ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಂಕಷ್ಟ ನಿವಾರಣೆಗಾಗಿ ಗಾಣಗಾಪುರದ ದತ್ತನಿಗೆ ವಿಶೇಷ ಪೂಜೆ ಸಲ್ಲಿಸಿದ ಎಚ್‌ ಡಿ ರೇವಣ್ಣ