Webdunia - Bharat's app for daily news and videos

Install App

"ಸಲಗ" "ರಿಯಲ್ ಎಸ್ಟೇಟ್" ಚಿತ್ರತಂಡಗಳು ಪೊಲೀಸರಿಗೆ ನೀಡಿದ್ದ ದೂರು ಪ್ರತಿ ದೂರು ಸಂಧಾನದಲ್ಲಿ ಅಂತ್ಯ

Webdunia
ಗುರುವಾರ, 21 ಅಕ್ಟೋಬರ್ 2021 (20:53 IST)
ಬೆಂಗಳೂರು: ಗಾಂಧಿನಗರದ ಮುಖ್ಯ ಚಿತ್ರಮಂದಿರಗಳಲ್ಲಿ ಒಂದಾದ ತ್ರಿವೇಣಿ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್​ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಲಗ ಮತ್ತು ರಿಯಲ್​ ಎಸ್ಟೇಟ್​ ಚಿತ್ರ ತಾಣದ ನಡುವೆ ಕಿತ್ತಾಟ ತಾರಕೇರಿತ್ತು. ಇದೀಗ  ದುನಿಯಾ ವಿಜಯ್​ ನಟನೆಯ ಸಲಗ ಚಿತ್ರ ತ್ರಿವೇಣಿ ಚಿತ್ರಮಂದಿರಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದೇ ಥಿಯೇಟರ್​ನಲ್ಲಿ ರಿಯಲ್​ ಎಸ್ಟೇಟ್​ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಮಾಪಕ ರಾಮಕೃಷ್ಣಪ್ಪ ಮುಂದಾಗಿದ್ದರು. ಆ ಕಾರಣಕ್ಕೆ ಎರಡೂ ಚಿತ್ರತಂಡಗಳ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ಈ ಕುರಿತು ಬುಧವಾರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಲಾಗಿತ್ತು ಮತ್ತು ದೂರನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಆದರೆ ಇಂದು ಉಭಯ ಚಿತ್ರ ತಂಡಗಳು ಪೋಲೀಸರ ಸಮ್ಮುಖದಲ್ಲಿ  ಕಾಂಪ್ರಮೈಸ್ ಮಾಡಿಕೊಂಡಿವೆ. 
 
ಪೊಲೀಸ್​ ಠಾಣೆಯಲ್ಲಿ ಸಂಧಾನ ಮಾಡಿಕೊಳ್ಳಲಾಗಿದ್ದು ಗಾಂಧಿನಗರದಲ್ಲಿ ಷಡ್ಯಂತ್ರ ಮಾಡುವವರಿಂದ ಈ ರೀತಿ ಸಮಸ್ಯೆ ಆಯಿತು ಎಂದು ಎರಡೂ ಚಿತ್ರತಂಡದವರು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ದುನಿಯಾ ವಿಜಯ್​ ಹೀರೋ ಆಗುತ್ತಿರುವ ರಾಮಕೃಷ್ಣಪ್ಪ ಅವರ ಮಗನಿಗೆ ಒಳ್ಳೆಯದಾಗಲಿ. ಗಾಂಧಿನಗರದಲ್ಲಿ ಕೆಲವರು ಷಡ್ಯಂತ್ರ ಮಾಡಿ ನಮ್ಮ ಮಧ್ಯೆ ತಂದಿಡುತ್ತಾರೆ ಹೇಳಿದ್ದಾರೆ. 
 
ನಾವಿಬ್ಬರು ಕಿತ್ತಾಡಿಕೊಂಡರೆ ಮೂರನೆಯವರು ಎಂಟ್ರಿ ನೀಡುತ್ತಾರೆ. ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಯಾವುದೇ ಸಮಸ್ಯೆಯನ್ನು ಚಿಕ್ಕದಾಗಿರುವಾಗಲೇ ಪರಿಹರಿಸಿಕೊಳ್ಳಬೇಕು ಎಂದು ರಿಯಲ್​ ಎಸ್ಟೇಟ್​ ಚಿತ್ರದ ನಿರ್ಮಾಪಕ ರಾಮಕೃಷ್ಣಪ್ಪ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments