Select Your Language

Notifications

webdunia
webdunia
webdunia
webdunia

ಕಂಪ್ಲಿ ಸೇತುವೆ ಜಲಾವೃತ

ಕಂಪ್ಲಿ ಸೇತುವೆ ಜಲಾವೃತ
ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ  ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಡ್ಯಾಂನಿಂದ ನದಿಗೆ 1,74,797 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕಂಪ್ಲಿ ಸೇತುವೆ ಜಲಾವೃತವಾಗಿದೆ. ಗಂಟೆಯಿಂದ ಗಂಟೆಗೆ ನದಿ ಪಾತ್ರಕ್ಕೆ ಹೊರಹರಿವು ಹೆಚ್ಚಳವಾಗುತ್ತಿದ್ದು, ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. 25 ಗೇಟಗಳ ಮೂಲಕ ನದಿಗೆ ನೀರು ಬಿಡಲಾಗಿದೆ. 2 ಲಕ್ಷ ಕ್ಯೂಸೆಕ್​ವರೆಗೂ ನದಿಗೆ ನೀರು ಹರಿಸುವ ಕುರಿತು ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ. ಇನ್ನು ಕೃಷ್ಣ ನದಿ ಪಾತ್ರದಲ್ಲಿರುವ ಜಲಾಶಯಗಳು ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಫಿನಾಡಲ್ಲಿ ನಿಲ್ಲದ ವರುಣಾರ್ಭಟ