Webdunia - Bharat's app for daily news and videos

Install App

ಮನೆ ದರೋಡೆ ಮಾಡಲು ಆಗಿಲ್ಲವೆಂದು ಕೋಪದಿಂದ ಕಂಪೌಂಡ್ ಒಡೆದ ದುಷ್ಕರ್ಮಿಗಳು

Webdunia
ಮಂಗಳವಾರ, 5 ಮಾರ್ಚ್ 2019 (07:36 IST)
ಮಂಡ್ಯ : ಮನೆಗೆ ನುಗ್ಗಿ ದರೋಡೆ ಮಾಡಲು ಆಗದ  ದುಷ್ಕರ್ಮಿಗಳು ಮನೆಯ ಕಂಪೌಂಡ್ ನಾಶಪಡಿಸಿದ ಘಟನೆ ಭಾನುವಾರ ತಡರಾತ್ರಿ 12.30 ರ ಸಮಯದಲ್ಲಿ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಸೊಳ್ಳೇಪುರ ಸಮೀಪ ತೋಟದ ಮನೆಯಲ್ಲಿ ನಡೆದಿದೆ.


ಸರಕಾರಿ ಆಸ್ಪತ್ರೆಯ ವೈದ್ಯೆ ಡಾ.ಹರ್ಷವರ್ದಿನಿ ಹಾಗೂ ಬ್ಯಾಂಕ್ ಉದ್ಯೋಗಿ ಗಿರಿಪ್ರಸಾದ್ ಅವರ ತೋಟದ ಮನೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ದರೋಡೆಗೆ ಯತ್ನಿಸಿದೆ. ಆದರೆ ಆ ವೇಳೆ ಅವರಿಗೆ ದರೋಡೆ ಮಾಡಲು ಆಗದೇ ಇರುವುದಕ್ಕೆ ಕೋಪಗೊಂಡು ಮನೆಯ ಕಂಪೌಂಡನ್ನು ಟ್ರ್ಯಾಕ್ಟರ್ ಬಳಸಿ ಬೀಳಿಸಿದ್ದಾರೆ. ಅಲ್ಲದೆ ಮನೆ ಎದುರು ನಿಲ್ಲಿಸಿದ್ದ ಎರಡು ಬೈಕ್ ಹಾಗೂ ಕಾರನ್ನು ಜಖಂಗೊಳಿಸಿ ಪರಾರಿಯಾಗಿದ್ದಾರೆ.


ಘಟನಾ ಸ್ಥಳಕ್ಕೆ ಕಿಕ್ಕೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಗುಂಪಿನಲ್ಲಿದ್ದ ಓರ್ವನನ್ನು ಬಂಧಿಸಿದ ಪೊಲೀಸರು ಕಂಪೌಂಡ್ ನಾಶಕ್ಕೆ ಬಳಸಿದ ಟ್ರ್ಯಾಕ್ಟರನ್ನು ವಶಪಡಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments