Webdunia - Bharat's app for daily news and videos

Install App

ಮನೆ ದರೋಡೆ ಮಾಡಲು ಆಗಿಲ್ಲವೆಂದು ಕೋಪದಿಂದ ಕಂಪೌಂಡ್ ಒಡೆದ ದುಷ್ಕರ್ಮಿಗಳು

Webdunia
ಮಂಗಳವಾರ, 5 ಮಾರ್ಚ್ 2019 (07:36 IST)
ಮಂಡ್ಯ : ಮನೆಗೆ ನುಗ್ಗಿ ದರೋಡೆ ಮಾಡಲು ಆಗದ  ದುಷ್ಕರ್ಮಿಗಳು ಮನೆಯ ಕಂಪೌಂಡ್ ನಾಶಪಡಿಸಿದ ಘಟನೆ ಭಾನುವಾರ ತಡರಾತ್ರಿ 12.30 ರ ಸಮಯದಲ್ಲಿ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಸೊಳ್ಳೇಪುರ ಸಮೀಪ ತೋಟದ ಮನೆಯಲ್ಲಿ ನಡೆದಿದೆ.


ಸರಕಾರಿ ಆಸ್ಪತ್ರೆಯ ವೈದ್ಯೆ ಡಾ.ಹರ್ಷವರ್ದಿನಿ ಹಾಗೂ ಬ್ಯಾಂಕ್ ಉದ್ಯೋಗಿ ಗಿರಿಪ್ರಸಾದ್ ಅವರ ತೋಟದ ಮನೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ದರೋಡೆಗೆ ಯತ್ನಿಸಿದೆ. ಆದರೆ ಆ ವೇಳೆ ಅವರಿಗೆ ದರೋಡೆ ಮಾಡಲು ಆಗದೇ ಇರುವುದಕ್ಕೆ ಕೋಪಗೊಂಡು ಮನೆಯ ಕಂಪೌಂಡನ್ನು ಟ್ರ್ಯಾಕ್ಟರ್ ಬಳಸಿ ಬೀಳಿಸಿದ್ದಾರೆ. ಅಲ್ಲದೆ ಮನೆ ಎದುರು ನಿಲ್ಲಿಸಿದ್ದ ಎರಡು ಬೈಕ್ ಹಾಗೂ ಕಾರನ್ನು ಜಖಂಗೊಳಿಸಿ ಪರಾರಿಯಾಗಿದ್ದಾರೆ.


ಘಟನಾ ಸ್ಥಳಕ್ಕೆ ಕಿಕ್ಕೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಗುಂಪಿನಲ್ಲಿದ್ದ ಓರ್ವನನ್ನು ಬಂಧಿಸಿದ ಪೊಲೀಸರು ಕಂಪೌಂಡ್ ನಾಶಕ್ಕೆ ಬಳಸಿದ ಟ್ರ್ಯಾಕ್ಟರನ್ನು ವಶಪಡಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments