Publish Date: Tue, 23 Jan 2024 (17:45 IST)
Updated Date: Tue, 23 Jan 2024 (17:52 IST)
ಬೆಂಗಳೂರು-ಅಸ್ಸಾಂನಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ದಾಳಿ ಯತ್ನದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರ ವರ್ತನೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿದೆ.ಬೆಂಗಳೂರು ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೈಪಡೆ ಪ್ರತಿಭಟನೆ ಮಾಡಿದೆ.ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಪರಿಷತ್ ಸದಸ್ಯ ಯುಬಿ ವೆಂಕಟೇಶ್, ಆರ್ ವಿ ದೇವರಾಜ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.