Webdunia - Bharat's app for daily news and videos

Install App

ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್ ಸ್ಥಗಿತ

Sampriya
ಶನಿವಾರ, 22 ಫೆಬ್ರವರಿ 2025 (18:10 IST)
Photo Courtesy X
ಬೆಳಗಾವಿ: ಇಲ್ಲಿನ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ನಡೆದ ಹಲ್ಲೆ ಪ್ರಕರಣ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಖಂಡಿಸಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ.

ಸದ್ಯ ಬೆಳಗಾವಿ ಗಡಿಯಲ್ಲಿ ದ್ವೇಷಮಯ ವಾತಾವರಣದಿಂದ ಕೂಡಿದ್ದು, ಈ ಹಿನ್ನೆಲೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ.

ಏನಿದು ಪ್ರಕರಣ:  ಮರಾಠಿ ಬರಲ್ಲ.. ಕನ್ನಡ ಮಾತಾಡಿ ಅಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ. ಮರಾಠಿಗರ ಈ ಪುಂಡಾಟಕ್ಕೆ ಕಂಡಕ್ಟರ್ ಕಣ್ಣೀರು ಹಾಕಿದ್ದರು. ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತ ಮಾಡಲಾಗಿದೆ.

ಹೀಗಾಗಿ ಬೆಳಗಾವಿ ಗಡಿವರೆಗೂ ಮಾತ್ರ ಮಹಾರಾಷ್ಟ್ರ ಸಾರಿಗೆ ಬಸ್​ಗಳು ಬರುತ್ತಿವೆ. ಆದರೆ ಕರ್ನಾಟಕದಿಂದ ಎಂದಿನಂತೆ ಮಹಾರಾಷ್ಟ್ರದ ವಿವಿಧ ಕಡೆಗೆ ರಾಜ್ಯದ ಸಾರಿಗೆ ಬಸ್​​ಗಳು ಸಂಚಾರ ಮಾಡುತ್ತಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments