Webdunia - Bharat's app for daily news and videos

Install App

ಬಸ್‌ನಲ್ಲೇ ನೇಣು ಬಿಗಿದುಕೊಂಡ ಬಸ್ ಕಂಡಕ್ಟರ್

Webdunia
ಬುಧವಾರ, 5 ಅಕ್ಟೋಬರ್ 2016 (11:29 IST)
ಕೆಎಸ್‌ಆರ್‌ಟಿಸಿ ನಿರ್ವಾಹಕನೊಬ್ಬ ಬಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿಯ ಚಿಂಚೊಳ್ಳಿ ಬಸ್ ಘಟಕದಲ್ಲಿ ಮಂಗಳವಾರ ನಡೆದಿದೆ.

ಈರಣ್ಣ ಆತ್ಮಹತ್ಯೆಗೆ ಶರಣಾದ ಬಸ್ ಕಂಡಕ್ಟರ್. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೀದರ್ ಡಿಪೋದಲ್ಲಿ ನಿಲ್ಲಿಸಲಾಗಿದ್ದ ಬಸ್ ನಲ್ಲಿ ಈರಣ್ಣ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.
 
ಮೃತನನ್ನು ಈರಣ್ಣ ಎಂದು ಗುರುತಿಸಲಾಗಿದ್ದು ಈತ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೀನಕೆರಾ ಗ್ರಾಮದ ನಿವಾಸಿಯಾಗಿದ್ದಾನೆ.ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬೀದರ್ ಡಿಪೋದಲ್ಲಿ ಈತ ಸಾವಿಗೆ ಶರಣಾಗಿದ್ದಾನೆ
 
ನಿನ್ನೆ ಬೀದರ್‌ನಿಂದ ಚಿಂಚೋಳಿಗೆ ಹೋಗುತ್ತಿದ್ದ ಕೆಎ-38, ಎಫ್-827 ಸಂಖ್ಯೆಯ ಬಸ್‌ಗೆ ಈರಣ್ಣ ನಿರ್ವಾಹಕರಾಗಿದ್ದರು. ಬಸ್ ತಪಾಸಣೆಗೆ ಬಂದ ಸಂಚಾರಿ ನಿರೀಕ್ಷಕರು ಬಸ್‌ನಲ್ಲಿ ಇಬ್ಬರು ಪ್ರಯಾಣಿಕರ ಬಳಿ ಟಿಕೆಟ್ ಇಲ್ಲದಿದ್ದುದಕ್ಕೆ ಈರಣ್ಣನಿಗೆ ದಂಡ ವಿಧಿಸಿ ಅಮಾನತು ಮಾಡಿದ್ದರು.
 
ಇದರಿಂದ ಮನನೊಂದಿದ್ದ ಈರಣ್ಣ ನಿನ್ನೆ ರಾತ್ರಿ ಬಸ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
 
ಚಿಂಚೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments