ಬಸ್‌ನಲ್ಲೇ ನೇಣು ಬಿಗಿದುಕೊಂಡ ಬಸ್ ಕಂಡಕ್ಟರ್

Webdunia
ಬುಧವಾರ, 5 ಅಕ್ಟೋಬರ್ 2016 (11:29 IST)
ಕೆಎಸ್‌ಆರ್‌ಟಿಸಿ ನಿರ್ವಾಹಕನೊಬ್ಬ ಬಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿಯ ಚಿಂಚೊಳ್ಳಿ ಬಸ್ ಘಟಕದಲ್ಲಿ ಮಂಗಳವಾರ ನಡೆದಿದೆ.

ಈರಣ್ಣ ಆತ್ಮಹತ್ಯೆಗೆ ಶರಣಾದ ಬಸ್ ಕಂಡಕ್ಟರ್. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೀದರ್ ಡಿಪೋದಲ್ಲಿ ನಿಲ್ಲಿಸಲಾಗಿದ್ದ ಬಸ್ ನಲ್ಲಿ ಈರಣ್ಣ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.
 
ಮೃತನನ್ನು ಈರಣ್ಣ ಎಂದು ಗುರುತಿಸಲಾಗಿದ್ದು ಈತ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೀನಕೆರಾ ಗ್ರಾಮದ ನಿವಾಸಿಯಾಗಿದ್ದಾನೆ.ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬೀದರ್ ಡಿಪೋದಲ್ಲಿ ಈತ ಸಾವಿಗೆ ಶರಣಾಗಿದ್ದಾನೆ
 
ನಿನ್ನೆ ಬೀದರ್‌ನಿಂದ ಚಿಂಚೋಳಿಗೆ ಹೋಗುತ್ತಿದ್ದ ಕೆಎ-38, ಎಫ್-827 ಸಂಖ್ಯೆಯ ಬಸ್‌ಗೆ ಈರಣ್ಣ ನಿರ್ವಾಹಕರಾಗಿದ್ದರು. ಬಸ್ ತಪಾಸಣೆಗೆ ಬಂದ ಸಂಚಾರಿ ನಿರೀಕ್ಷಕರು ಬಸ್‌ನಲ್ಲಿ ಇಬ್ಬರು ಪ್ರಯಾಣಿಕರ ಬಳಿ ಟಿಕೆಟ್ ಇಲ್ಲದಿದ್ದುದಕ್ಕೆ ಈರಣ್ಣನಿಗೆ ದಂಡ ವಿಧಿಸಿ ಅಮಾನತು ಮಾಡಿದ್ದರು.
 
ಇದರಿಂದ ಮನನೊಂದಿದ್ದ ಈರಣ್ಣ ನಿನ್ನೆ ರಾತ್ರಿ ಬಸ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
 
ಚಿಂಚೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments