Publish Date: Wed, 22 Feb 2023 (10:22 IST)
Updated Date: Wed, 22 Feb 2023 (10:22 IST)
ಬೆಂಗಳೂರು : ಲಕ್ಷಾಂತರ ರೂಪಾಯಿ, ಕೋಟ್ಯಂತರ ರೂಪಾಯಿ ಮೋಸ ಮಾಡಿದವರ ವಿರುದ್ಧ ನ್ಯಾಯಲಯದ ಮೆಟ್ಟಿಲು ಏರಿ ನ್ಯಾಯಲಯಗಳು ನೀಡಿದ್ದ ತೀರ್ಪನ್ನು ನೋಡಿದ್ವಿ.
ಆದರೆ ಇಲ್ಲೊಬ್ಬ ಪ್ರಯಾಣಿಕ 1 ರೂ. ಚಿಲ್ಲರೆ ಹಣ ಕೊಡಲಿಲ್ಲ ಎಂದು ಬಿಎಂಟಿಸಿ ವಿರುದ್ಧ ಗ್ರಾಹಕರ ನ್ಯಾಯಲಯದ ಮೆಟ್ಟಿಲೇರುವ ಮೂಲಕ ಇಲಾಖೆ ಮತ್ತು ಸಿಬ್ಬಂದಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ.
2019ರ ಸೆ. 11ರಂದು ವಕೀಲ ರಮೇಶ್ ನಾಯಕ್ ಎಂಬುವವರು ಬಿಎಂಟಿಸಿ ವೋಲ್ವೋ ಬಸ್ಸಿನಲ್ಲಿ ಶಾಂತಿನಗರದಿಂದ ಮೆಜೆಸ್ಟಿಕ್ಗೆ ತೆರಳುತ್ತಿದ್ದರು. ಬಸ್ನಲ್ಲಿದ್ದಂತಹ ಲೇಡಿ ಕಂಡಕ್ಟರ್ 29 ರೂ.ಗಳ ಟಿಕೆಟ್ ನೀಡಿದ್ದಾರೆ. ಈ ವೇಳೆ ಪ್ರಯಾಣಿಕ 30 ರೂ. ನೀಡಿದ್ದರು. ಕೆಳಗೆ ಇಳಿಯುವ ಸಂದರ್ಭದಲ್ಲಿ 1 ರೂ. ಚಿಲ್ಲರೆ ಕೇಳಿದಾಗ ಕಂಡಕ್ಟರ್ ಚಿಲ್ಲರೆ ಇಲ್ಲ ಎಂದು ಹೇಳಿ ಉಳಿದ ಒಂದು ರೂ. ಹಣವನ್ನು ನೀಡಿಲ್ಲ.