Select Your Language

Notifications

webdunia
webdunia
webdunia
webdunia

ವಿಹೆಚ್‌ಪಿ ನಾಯಕ, ಬಿಜೆಪಿ ಅಭ್ಯರ್ಥಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ವಿಹೆಚ್‌ಪಿ ನಾಯಕ, ಬಿಜೆಪಿ ಅಭ್ಯರ್ಥಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ
ಮಂಗಳೂರು , ಶನಿವಾರ, 20 ಫೆಬ್ರವರಿ 2016 (12:26 IST)
ವಿಹೆಚ್‌ಪಿ ನಾಯಕ ಜಗದೀಶ್ ಶೇಣವ ಮತ್ತು ಗುರುಪುರ ಜಿಲ್ಲಾ ಪಂಚಾಯತ್ ಅಭ್ಯರ್ಥಿ ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಅಡ್ಡೂರು ಮತಗಟ್ಟೆಯಲ್ಲಿ ನಡೆದಿದೆ.

ಮತಕೇಂದ್ರದಿಂದ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಬಾರದು ಎಂಬ ನಿಯಮವಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗರು ಮತದಾನ ಕೇಂದ್ರದ ಗೇಟ್ ಬಳಿ ನಿಂತು ಮತದಾರರಿಗೆ ಆಮಿಷ ಒಡ್ಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಜಗದೀಶ್ ಮತ್ತು ಹರೀಶ್ ಮೇಲೆ ಹಲ್ಲೆ ನಡೆದಿದೆ. 
 
ಜಗದೀಶ್ ಅವರಿಗೆ ಸೇರಿದ ಟೊಯೋಟಾ ಕಾರ್‌ನ್ನು ಸಹ ಪುಡಿ ಮಾಡಲಾಗಿದೆ. 
 
ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

Share this Story:

Follow Webdunia kannada