ಕಾಂಗ್ರೆಸ್ ಶಾಸಕರಿಂದಲೇ ನೂತನ ಸಿಎಂ ಆಯ್ಕೆ: ಸಿಎಂ ಸ್ಪಷ್ಟನೆ

Webdunia
ಶುಕ್ರವಾರ, 13 ಅಕ್ಟೋಬರ್ 2017 (14:55 IST)
ಮುಂದಿನ ವಿಧಾನಸಭಾ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ಆದರೆ, ಹೊಸದಾಗಿ ಆಯ್ಕೆಯಾದ ಶಾಸಕರು ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  
ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆ ಕುರಿತಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲು ನವದೆಹಲಿಗೆ ಆಗಮಿಸಿರುವ ಸಿಎಂ, ಚುನಾವಣೆಯಲ್ಲಿ ಯಾರು ಪಕ್ಷದ ನೇತೃತ್ವ ವಹಿಸಿಕೊಳ್ಳುತ್ತಾರೆ ಎನ್ನುವ ಬಗ್ಗೆ ಅನುಮಾನ ಬೇಡ. ಶಾಸಕಾಂಗ ಪಕ್ಷದ ನಾಯಕರೇ ಸದಾ ಚುನಾವಣೆ ನೇತೃತ್ವವಹಿಸುತ್ತಾರೆ ಎಂದರು. 
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರೊಂದಿಗೆ ಭಿನ್ನಾಭಿಪ್ರಾಯವಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಒಂದಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. 
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಬರುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಳೆದ 2013ರಲ್ಲಿ ಗೆದ್ದ ಸೀಟುಗಳಿಗಿಂತ ಹೆಚ್ಚಿನ ಸೀಟುಗಳಲ್ಲಿ ಜಯಗಳಿಸುತ್ತೇವೆ ಎಂದರು.
 
 ಭ್ರಷ್ಟಾಚಾರದ ಮುಕ್ತ ಆಡಳಿತವನ್ನು ನೀಡಿದ್ದೇವೆ. ಬಿಜೆಪಿಯವರು ಹತಾಶೆಯಿಂದಾಗಿ ಕಾಂಗ್ರೆಸ್ ವಿರುದ್ಧ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

48 ಗಂಟೆಯಲ್ಲಿ 8 ದೇಶಗಳ ನಾಯಕರೊಂದಿಗೆ ಮೋದಿ ಮಾತುಕತೆ: ಏನಿದು ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments