Webdunia - Bharat's app for daily news and videos

Install App

ನಾಗಪುರ ದಿಕ್ಷಾ ಭೂಮಿ ಯಾತ್ರೆ ಅನುಯಾಯಿಗಳಿಗೆ ಶುಭ ಹಾರೈಕೆ

Webdunia
ಬುಧವಾರ, 17 ಅಕ್ಟೋಬರ್ 2018 (18:35 IST)
ಡಾ.ಬಿ.ಆರ್. ಅಂಬೇಡ್ಕರ ಅನುಯಾಯಿಗಳಿಗಾಗಿ ಏರ್ಪಡಿಸಲಾದ ನಾಗಪುರ ದಿಕ್ಷಾ ಭೂಮಿ ಯಾತ್ರೆಗೆ  ಪ್ರಯಾಣಿಸುತ್ತಿರುವ ಅನುಯಾಯಿಗಳಿಗೆ ಜಿಲ್ಲಾಧಿಕಾರಿ ಶುಭ ಹಾರೈಸಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಬಿ.ಆರ್. ಅಂಬೇಡ್ಕರ ಅನುಯಾಯಿಗಳಿಗಾಗಿ ಏರ್ಪಡಿಸಲಾದ ನಾಗಪುರ ದಿಕ್ಷಾ ಭೂಮಿ ಯಾತ್ರೆಗೆ ಕಲಬುರಗಿಯಿಂದ ಪ್ರಯಾಣಿಸುತ್ತಿರುವ ಅನುಯಾಯಿಗಳಿಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಶುಭ ಹಾರೈಸಿದರು.

ಬುದ್ಧ ವಿಹಾರದ ಆವರಣದಲ್ಲಿ ನಾಗಪುರ ದಿಕ್ಷಾ ಭೂಮಿ ಯಾತ್ರೆಗೆ ಪ್ರಯಾಣಿಸುತ್ತಿರುವ ಹವಾನಿಯಂತ್ರಿತ ಹಾಗೂ ಸುಖಾಸೀನ ಕೆ.ಎಸ್.ಆರ್.ಟಿ.ಸಿ.ಯ ಐರಾವತ ಮಲ್ಟಿ ಎಕ್ಸೆಲ್ ಮೂರು ಬಸ್ಸುಗಳಿಗೆ ಚಾಲನೆ ನೀಡಿ, ಕಲಬುರಗಿಯಿಂದ ಪ್ರಯಾಣಿಸುತ್ತಿರುವ ಎಲ್ಲ 144 ಅನುಯಾಯಿಗಳಿಗೆ ಪ್ರಯಾಣದ ಸಮಯದಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ವಸತಿ, ಊಟದ ವ್ಯವಸ್ಥೆ ಸಮರ್ಪಕವಾಗಿ  ಕಲ್ಪಿಸಬೇಕು ಎಂದರು.

ಈ ವರ್ಷದಿಂದ ನಾಗಪುರ ದಿಕ್ಷಾ ಭೂಮಿಗೆ ಅನುಯಾಯಿಗಳ ಯಾತ್ರೆ ವಿಶೇಷ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ ಅವರು ಇಂದು 23 ಬಸ್ಸುಗಳಿಗೆ ಚಾಲನೆ ನೀಡಿದ್ದಾರೆ. ಈ ಎಲ್ಲ ಬಸ್ಸುಗಳಲ್ಲಿ  ನಾಗಪುರಕ್ಕೆ ಪ್ರಯಾಣಿಸುವ ಅನುಯಾಯಿಗಳು ಅಕ್ಟೋಬರ್ 18, 19 ಹಾಗೂ 20ರಂದು ನಾಗಪುರದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಕ್ಟೋಬರ್ 20ರ ಸಾಯಂಕಾಲ ಸ್ವಜಿಲ್ಲೆಗಳಿಗೆ ತೆರಳುವರು. 
ಈ ಸಂದರ್ಭದಲ್ಲಿ ಗಣ್ಯರಾದ ವಿಠ್ಠಲ ದೊಡಮನಿ, ರಾಜೀವ ಜಾನೆ, ಮಲ್ಲಪ್ಪ ಹೊಸಮನಿ,  ಅಶೋಕ ವೀರನಾಯಕ, ಸುದರ್ಶನ ಮದನಕರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸತೀಶ ಮತ್ತಿತರರು ಉಪಸ್ಥಿತರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಸುರೇಶ್‌ಗೆ ಇಡಿ ಶಾಕ್‌: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌

ತಂದೆಯ ನಿರ್ಲಕ್ಷ್ಯಕ್ಕೆ ಮಗು ಬಲಿ: ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಕಂದಮ್ಮ ಸಾವು

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments