Webdunia - Bharat's app for daily news and videos

Install App

ಹಿಂದುಳಿದ ವರ್ಗದವರ ಹೀನಸ್ಥಿತಿಗೆ ಕಾಂಗ್ರೆಸ್ ನೇರ ಕಾರಣ: ಈಶ್ವರಪ್ಪ

Webdunia
ಶುಕ್ರವಾರ, 26 ಆಗಸ್ಟ್ 2016 (15:36 IST)
ದಲಿತರು ಕಾಂಗ್ರೆಸ್ ಪಕ್ಷದ ಆಸ್ತಿಯಲ್ಲ. ದಲಿತರು ಹಾಗೂ ಹಿಂದುಳಿದ ವರ್ಗದವರ ಹೀನಸ್ಥಿತಿಗೆ ಕಾಂಗ್ರೆಸ್ ಸರಕಾರವೇ ನೇರ ಕಾರಣ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಆರೋಪಿಸಿದ್ದಾರೆ.
 
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವೆಷ್ಟು? ಇದರಲ್ಲಿ ಎಷ್ಟು ಹಣವನ್ನು ಅಭಿವೃದ್ಧಿಗಾಗಿ ಖರ್ಚು ಮಾಡಿದ್ದಾರೆ ಲೆಕ್ಕ ಕೊಡಿ ಎಂದು ಕೇಳಿದರು.
 
ಭಾರತೀಯ ಜನತಾ ಪಾರ್ಟಿ ಎಂದರೆ ಒಂದು ಕುಟುಂಬವಿದ್ದಂತೆ. ಪಕ್ಷದಲ್ಲಿ ಕೆಲವು ಗೊಂದಲಗಳಿವೆ ಅಷ್ಟೇ, ನಾವು ಚರ್ಚೆ ನಡೆಸಿ ಗೊಂದಲಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆಯ ಉದ್ದೇಶ ಕೇವಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಮುಂದಿನ ಮುಖ್ಯಮಂತ್ರಿ ಮಾಡುವುದು ಅಲ್ಲ. ಜೊತೆಗೆ ದಲಿತರು ಹಾಗೂ ಹಿಂದುಳಿದ ವರ್ಗದವರ ಅಭಿವೃದ್ಧಿ ಮಾಡುವುದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments