Webdunia - Bharat's app for daily news and videos

Install App

ಜಗದೀಶ್ ಶೆಟ್ಟರ್ ಕೈಕೊಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಕಾಂಗ್ರೆಸ್

Krishnaveni K
ಭಾನುವಾರ, 28 ಜನವರಿ 2024 (10:25 IST)
ಬೆಂಗಳೂರು: ಜಗದೀಶ್ ಶೆಟ್ಟರ್ ಕೇವಲ ಒಂದೇ ವರ್ಷಕ್ಕೆ ಕೈ ಕೊಟ್ಟು ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ರಾಜ್ಯ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ.

ಇನ್ನೇನು ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಸಾಮಾನ್ಯ. ಆದರೆ ಜಗದೀಶ‍್ ಶೆಟ್ಟರ್ ಬಹಳ ವರ್ಷಗಳಿಂದ ಬಿಜೆಪಿಯಲ್ಲಿದ್ದು ಕಳೆದ ವರ್ಷವಷ್ಟೇ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗೆ ಹೋಗಿದ್ದವರು. ಅಲ್ಲಿ ಎಂಎಲ್ ಸಿ ಸಿಕ್ಕರೂ ಇದೀಗ ಲೋಕಸಭೆ ಚುನಾವಣೆ ವೇಳೆ ಮರಳಿ ಬಿಜೆಪಿಗೆ ಬಂದಿದ್ದಾರೆ.

ಇದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷಕ್ಕೆ ಬರುವವರಿದ್ದರೆ ನಿಷ್ಠರಾಗಿರಬೇಕು. ಹೀಗೆ ಬಂದು ಹಾಗೆ ಹೋಗುವವರನ್ನು ಬರಮಾಡಿಕೊಳ್ಳಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ.

ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಿಂದ ಆ ಪಕ್ಷಕ್ಕೆ ಎಷ್ಟು ಲಾಭವಾಗುತ್ತದೋ, ಬಿಡುತ್ತದೋ ಗೊತ್ತಿಲ್ಲ. ಆದರೆ ಈ ರೀತಿಯ ಪಕ್ಷಾಂತರ ಪರ್ವ ಚುನಾವಣೆ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಲಿದೆ. ವಿಧಾನಸಭೆಯಲ್ಲಿ ಸಿಕ್ಕ ಪ್ರಚಂಡ ಗೆಲುವನ್ನು ಒಂದೇ ವರ್ಷದಲ್ಲಿ ಲೋಕಸಭೆ ಚುನಾವಣೆ ವೇಳೆ ಕಳೆದುಕೊಳ್ಳಲು ಕಾಂಗ್ರೆಸ್ ತಯಾರಿಲ್ಲ.

ಹೀಗಾಗಿ ಲೋಕಸಭೆ ಚುನಾವಣೆ ಗೆಲ್ಲುವುದು ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಪಕ್ಷಕ್ಕೆ ಯಾರನ್ನೇ ಕರೆತರುವುದಿದ್ದರೂ ಇಲ್ಲಿನ ಸಿದ್ಧಾಂತ ಒಪ್ಪಿ ಪಕ್ಷಕ್ಕಾಗಿ ಕೆಲಸ ಮಾಡುವವರಿಗಷ್ಟೇ ಸ್ವಾಗತ ಎಂದು ಬೋರ್ಡ್ ಹಾಕಿ ಕುಳಿತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

Karnataka Weather: ಇಂದು ಮಳೆಯ ಅಬ್ಬರವಿರಲಿದೆಯಾ ಇಲ್ಲಿದೆ ಹವಾಮಾನ ವರದಿ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments