Webdunia - Bharat's app for daily news and videos

Install App

ಮುಸ್ಲಿಮರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಓಲೈಕೆ: ಯಡಿಯೂರಪ್ಪ ಕಿಡಿ

Webdunia
ಶನಿವಾರ, 16 ಸೆಪ್ಟಂಬರ್ 2017 (12:59 IST)
ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರ ಬಗ್ಗೆ ನಿಜವಾದ ಕಾಳಜಿಯಿಲ್ಲ. ಕೇವಲ ಓಟ್ ಬ್ಯಾಂಕ್‌ಗಾಗಿ ಮಾತ್ರ ಓಲೈಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಮುಸ್ಲಿಮರ ವಿರೋಧಿಯಲ್ಲ. ಉತ್ತರಪ್ರದೇಶದಲ್ಲಿ ಮುಸ್ಲಿಮರು ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದರಿಂದಲೇ ಅಧಿಕಾರಕ್ಕೆ ಬರುವಂತಾಗಿದೆ. ವಿರೋಧ ಪಕ್ಷಗಳು ಬಿಜೆಪಿಯನ್ನು ಮುಸ್ಲಿಮರ ವಿರೋಧಿ ಎಂದು ಬಿಂಬಿಸುತ್ತಿವೆ ಎಂದು ಆರೋಪಿಸಿದರು.
 
ಪ್ರಧಾನಿ ಮೋದಿ ಮುಸ್ಲಿಂ ಸಮುದಾಯಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಮುಸ್ಲಿಂ ಸಮುದಾಯದ ಏಳಿಗೆಗಾಗಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಘೋಷಣೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದರು.
 
ಮುಸ್ಲಿಮರಿಗಾಗಿ ಬೃಹತ್ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕೇಂದ್ರ ಸರಕಾರದಲ್ಲಿ ಸಚಿವರಾಗಿರುವ ಮುಸ್ಲಿಂ ಸಮುದಾಯದ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments