Select Your Language

Notifications

webdunia
webdunia
webdunia
webdunia

ಕಾಂಗ್ರೆಸ್-ಬಿಜೆಪಿ ಸ್ಟಾರ್ಟ್ ಅಪ್ ವಾರ್​

ಕಾಂಗ್ರೆಸ್-ಬಿಜೆಪಿ ಸ್ಟಾರ್ಟ್ ಅಪ್ ವಾರ್​
bangalore , ಬುಧವಾರ, 6 ಏಪ್ರಿಲ್ 2022 (18:52 IST)
ಬೆಂಗಳೂರಿನ ಕೋರಮಂಗಲದ ಖಾತಾ ಬುಕ್ ಸಿಇಓ ರವೀಶ್ ನರೇಶ್ ಐದು ದಿನಗಳ ಹಿಂದೆ ಬೆಂಗಳೂರು ಮೂಲಭೂತ ಸೌಕರ್ಯ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದರು. ಈ ಟ್ವೀಟನ್ನೇ ಬಂಡವಾಳ ಮಾಡಿಕೊಂಡು ತೆಲಂಗಾಣ ಸಚಿವ ಕೆಟಿಆರ್ ನಿಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಂಡು ನಮ್ಮ ಹೈದರಾಬಾದ್‍ಗೆ ಬನ್ನಿ ಎಂದು ಟ್ವೀಟ್ ಮಾಡಿದ್ದಾರೆ. ಕೆಟಿಆರ್ ಟ್ವೀಟ್ ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಮ್ಮ ಚಾಲೆಂಜ್ ಸ್ವೀಕರಿಸುತ್ತೇನೆ. 2023ಕ್ಕೆ ನಮ್ಮದೇ ಸರ್ಕಾರ ಬರುತ್ತೆ, ಆಗ ಬೆಂಗಳೂರನ್ನ ಉತ್ತಮ ನಗರವಾಗಿ ರೂಪಿಸುತ್ತೇವೆ ಎಂದಿದ್ದಾರೆ. ಹೀಗೆ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿ ಒಂದರ ಸಿಇಓ ಮಾಡಿದ ಟ್ವೀಟ್ ಈಗ ರಾಜಕೀಯ ಕೆಸರೆಚಾಟಕ್ಕೆ ವೇದಿಕೆಯಾಗಿದೆ. ಇದಕ್ಕೆ ಬೊಮ್ಮಾಯಿ ತಿರುಗೇಟು ನೀಡಿದ್ದು, ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರ್ತಿದ್ದಾರೆ. ಬರೀ ಭಾರತದ ಉದ್ಯಮಿಗಳಷ್ಟೇ ಬರುತ್ತಿಲ್ಲ. ಅತೀ ಹೆಚ್ಚು ಸ್ಟಾರ್ಟಪ್‍ಗಳು ಬೆಂಗಳೂರಿನಲ್ಲಿವೆ. ಬೆಂಗಳೂರನ್ನು ಹೈದರಾಬಾದ್​ಗೆ, ಕರ್ನಾಟವನ್ನು ತೆಲಂಗಾಣಕ್ಕೆ ಹೋಲಿಸುವುದು ಹಾಸ್ಯಾಸ್ಪದ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯೂ-ಟರ್ನ್​ ಹೊಡೆದ ಗೃಹ ಸಚಿವರು