ಕಾಂಗ್ರೆಸ್-ಬಿಜೆಪಿ ಸ್ಟಾರ್ಟ್ ಅಪ್ ವಾರ್​

Webdunia
ಬುಧವಾರ, 6 ಏಪ್ರಿಲ್ 2022 (18:52 IST)
ಬೆಂಗಳೂರಿನ ಕೋರಮಂಗಲದ ಖಾತಾ ಬುಕ್ ಸಿಇಓ ರವೀಶ್ ನರೇಶ್ ಐದು ದಿನಗಳ ಹಿಂದೆ ಬೆಂಗಳೂರು ಮೂಲಭೂತ ಸೌಕರ್ಯ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದರು. ಈ ಟ್ವೀಟನ್ನೇ ಬಂಡವಾಳ ಮಾಡಿಕೊಂಡು ತೆಲಂಗಾಣ ಸಚಿವ ಕೆಟಿಆರ್ ನಿಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಂಡು ನಮ್ಮ ಹೈದರಾಬಾದ್‍ಗೆ ಬನ್ನಿ ಎಂದು ಟ್ವೀಟ್ ಮಾಡಿದ್ದಾರೆ. ಕೆಟಿಆರ್ ಟ್ವೀಟ್ ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಮ್ಮ ಚಾಲೆಂಜ್ ಸ್ವೀಕರಿಸುತ್ತೇನೆ. 2023ಕ್ಕೆ ನಮ್ಮದೇ ಸರ್ಕಾರ ಬರುತ್ತೆ, ಆಗ ಬೆಂಗಳೂರನ್ನ ಉತ್ತಮ ನಗರವಾಗಿ ರೂಪಿಸುತ್ತೇವೆ ಎಂದಿದ್ದಾರೆ. ಹೀಗೆ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿ ಒಂದರ ಸಿಇಓ ಮಾಡಿದ ಟ್ವೀಟ್ ಈಗ ರಾಜಕೀಯ ಕೆಸರೆಚಾಟಕ್ಕೆ ವೇದಿಕೆಯಾಗಿದೆ. ಇದಕ್ಕೆ ಬೊಮ್ಮಾಯಿ ತಿರುಗೇಟು ನೀಡಿದ್ದು, ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರ್ತಿದ್ದಾರೆ. ಬರೀ ಭಾರತದ ಉದ್ಯಮಿಗಳಷ್ಟೇ ಬರುತ್ತಿಲ್ಲ. ಅತೀ ಹೆಚ್ಚು ಸ್ಟಾರ್ಟಪ್‍ಗಳು ಬೆಂಗಳೂರಿನಲ್ಲಿವೆ. ಬೆಂಗಳೂರನ್ನು ಹೈದರಾಬಾದ್​ಗೆ, ಕರ್ನಾಟವನ್ನು ತೆಲಂಗಾಣಕ್ಕೆ ಹೋಲಿಸುವುದು ಹಾಸ್ಯಾಸ್ಪದ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments