Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕರ ಹಾಜರಿಗೆ ಮಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Congress
ಬೆಂಗಳೂರು , ಸೋಮವಾರ, 30 ಮೇ 2016 (10:35 IST)
ಬೆಂಗಳೂರು: ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸಭೆ ಕರೆದಿದ್ದಾರೆ. 
 
ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಸ್ಪರ್ಧೆಮಾಡುವ ಅಭ್ಯರ್ಥಿಗಳಿಗೆ 10 ಶಾಸಕರು ಬೆಂಬಲ ಸೂಚಿಸುವುದು ಕಡ್ಡಾಯವಾಗಿದೆ. ಆದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ.
 
ವಿಧಾನ ಪರಿಷತ್‌ ಚುನಾವಣೆಗೆ ಅಲ್ಲಂ ವೀರಭದ್ರಪ್ಪ, ರಿಜ್ವಾನ್ ಅರ್ಷದ್, ಆರ್.ಬಿ. ತಿಮ್ಮಾಪುರ್ ಮತ್ತು ವೀಣಾ ಅಚ್ಚಯ್ಯ ಸ್ಪರ್ಧೆ ಮಾಡುತ್ತಿದ್ದು, ರಾಜ್ಯಸಭೆ ಚುನಾವಣೆಗೆ ಆಸ್ಕರ್ ಫರ್ನಾಂಡಿಸ್ ಮತ್ತು ಜಯರಾಂ ರಮೇಶ್ ಸ್ಪರ್ಧೆ ಮಾಡುತ್ತಿದ್ದಾರೆ. ಈ ಎಲ್ಲ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯಸಭೆಗೆ ಮೂರನೇಯ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

2 ವರ್ಷದ ಲೆಕ್ಕ ಕೊಟ್ಟು, ಆಶೀರ್ವಾದ ಪಡೆಯಲು ಬಂದಿದ್ದೇನೆ: ಪ್ರಧಾನಿ ಮೋದಿ