Webdunia - Bharat's app for daily news and videos

Install App

ಸಿದ್ದರಾಮಯ್ಯ ಜೊತೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ವರ್ತನೆಗೆ ಕಾಂಗ್ರೆಸ್ ಕ್ಲೀನ್ ಬೋಲ್ಡ್: ವಿಡಿಯೋ

Sampriya
ಬುಧವಾರ, 12 ಫೆಬ್ರವರಿ 2025 (16:49 IST)
Photo Courtesy X
ಬೆಂಗಳೂರು: ಮೊಣಕಾಲು ನೋವಿನ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇನ್ವೆಸ್ಟ್ ಕರ್ನಾಟಕ 2025 ಉದ್ಘಾಟನಾ ಸಮಾರಂಭಕ್ಕೆ ಗಾಲಿ ಕುರ್ಚಿಯಲ್ಲಿ ಆಗಮಿಸಿದ್ದರು. ಈ ವೇಳೆ ಸಿಎಂ ಜತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆದುಕೊಂಡ ರೀತಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಕೇಂದ್ರ ಸಚಿವರನ್ನು ಸ್ವಾಗತಿಸಲು ಗಾಲಿ ಕುರ್ಚಿಯಿಂದ ಎದ್ದೇಳಲು ಹೋದ ಸಿದ್ದರಾಮಯ್ಯ ಅವರನ್ನು ರಾಜನಾಥ್ ಅವರು ಬೇಡ ಎಂದು ಹೇಳಿ ಅವರೇ ವಾಪಾಸ್‌ ಚೇರ್‌ನಲ್ಲಿ ಕೂರಿಸಿದ್ದಾರೆ.  ಅದಲ್ಲದೆ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ಅಷ್ಟೇ ಅಲ್ಲದೆ ಕಾರ್ಯಕ್ರಮ ನಂತರ ಗಾಲಿ ಕುರ್ಚಿಯಲ್ಲಿದ್ದ ಸಿದ್ದರಾಮಯ್ಯ ಅವರ ಕೈಯನ್ನೇ ಹಿಡಿಯುತ್ತ ರಾಜನಾಥ್ ಸಿಂಗ್ ಅವರು ಹೊರನಡೆದರು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇಬ್ಬರೂ ಪ್ರಬುದ್ಧ ರಾಜಕಾರಣಿಗಳ ಆತ್ಮೀಯ ಭೇಟಿಯ ಕ್ಷಣಗಳನ್ನು ಕೊಂಡಾಡುತ್ತಿದ್ದಾರೆ.

ಇಬ್ಬರ ಸೈದ್ಧಾಂತಿಕ ವಿಚಾರಧಾರೆಗಳು ಬೇರೆ ಬೇರೆಯಾಗಿರಬಹುದು. ಆದರೆ ಅವರಲ್ಲಿರುವ ಮಾನವೀಯ ಮೌಲ್ಯ ಇಂದು ಎಲ್ಲರ ಮೆಚ್ಚುಗೆ ಪಾತ್ರವಾಗಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್ ಮಾಡುತ್ತಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್ ಮಾಡಿ ಬರೆದುಕೊಂಡಿದ್ದಾರೆ. ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರ ಅನುಕರಣೀಯ ನಡುವಳಿಕೆಯನ್ನು ನೋಡಿ ಹೃದಯಸ್ಪರ್ಶವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments