ಸಿದ್ದರಾಮಯ್ಯ ಜೊತೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ವರ್ತನೆಗೆ ಕಾಂಗ್ರೆಸ್ ಕ್ಲೀನ್ ಬೋಲ್ಡ್: ವಿಡಿಯೋ

Sampriya
ಬುಧವಾರ, 12 ಫೆಬ್ರವರಿ 2025 (16:49 IST)
Photo Courtesy X
ಬೆಂಗಳೂರು: ಮೊಣಕಾಲು ನೋವಿನ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇನ್ವೆಸ್ಟ್ ಕರ್ನಾಟಕ 2025 ಉದ್ಘಾಟನಾ ಸಮಾರಂಭಕ್ಕೆ ಗಾಲಿ ಕುರ್ಚಿಯಲ್ಲಿ ಆಗಮಿಸಿದ್ದರು. ಈ ವೇಳೆ ಸಿಎಂ ಜತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆದುಕೊಂಡ ರೀತಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಕೇಂದ್ರ ಸಚಿವರನ್ನು ಸ್ವಾಗತಿಸಲು ಗಾಲಿ ಕುರ್ಚಿಯಿಂದ ಎದ್ದೇಳಲು ಹೋದ ಸಿದ್ದರಾಮಯ್ಯ ಅವರನ್ನು ರಾಜನಾಥ್ ಅವರು ಬೇಡ ಎಂದು ಹೇಳಿ ಅವರೇ ವಾಪಾಸ್‌ ಚೇರ್‌ನಲ್ಲಿ ಕೂರಿಸಿದ್ದಾರೆ.  ಅದಲ್ಲದೆ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ಅಷ್ಟೇ ಅಲ್ಲದೆ ಕಾರ್ಯಕ್ರಮ ನಂತರ ಗಾಲಿ ಕುರ್ಚಿಯಲ್ಲಿದ್ದ ಸಿದ್ದರಾಮಯ್ಯ ಅವರ ಕೈಯನ್ನೇ ಹಿಡಿಯುತ್ತ ರಾಜನಾಥ್ ಸಿಂಗ್ ಅವರು ಹೊರನಡೆದರು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇಬ್ಬರೂ ಪ್ರಬುದ್ಧ ರಾಜಕಾರಣಿಗಳ ಆತ್ಮೀಯ ಭೇಟಿಯ ಕ್ಷಣಗಳನ್ನು ಕೊಂಡಾಡುತ್ತಿದ್ದಾರೆ.

ಇಬ್ಬರ ಸೈದ್ಧಾಂತಿಕ ವಿಚಾರಧಾರೆಗಳು ಬೇರೆ ಬೇರೆಯಾಗಿರಬಹುದು. ಆದರೆ ಅವರಲ್ಲಿರುವ ಮಾನವೀಯ ಮೌಲ್ಯ ಇಂದು ಎಲ್ಲರ ಮೆಚ್ಚುಗೆ ಪಾತ್ರವಾಗಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್ ಮಾಡುತ್ತಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್ ಮಾಡಿ ಬರೆದುಕೊಂಡಿದ್ದಾರೆ. ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರ ಅನುಕರಣೀಯ ನಡುವಳಿಕೆಯನ್ನು ನೋಡಿ ಹೃದಯಸ್ಪರ್ಶವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆ, ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಅಯ್ಯಪ್ಪ ಸ್ವಾಮಿ ಸುಮ್ಮನೆ ಬಿಡುವುದಿಲ್ಲ: ಜಾರ್ಜ್‌ ಕುರಿಯನ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮುಂದಿನ ಸುದ್ದಿ
Show comments