Webdunia - Bharat's app for daily news and videos

Install App

ಸಚಿವ ನಾಗೇಶ್ ವಿರುದ್ಧ ಕಾಂಗ್ರೆಸ್ ದೂರು

Webdunia
ಶುಕ್ರವಾರ, 12 ಆಗಸ್ಟ್ 2022 (17:29 IST)
ತ್ರಿವರ್ಣ ಧ್ವಜಕ್ಕಿಂತ ಮೇಲೆ ಎಬಿವಿಪಿ‌ ಧ್ವಜ ಹಿಡಿದು ಶಿಕ್ಷಣ ಸಚಿವ ಬಿ.ಸಿ ‌ನಾಗೇಶ್ ಮೆರವಣಿಗೆಯಲ್ಲಿ ಸಾಗಿದ್ದಾರೆಂಬ ವಿಷಯ ಸಾಕಷ್ಟು ಚರ್ಚೆಗೆ ಒಳಪಟ್ಟಿದೆ. ಈ ಕುರಿತಂತೆ ಸಚಿವರ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಿಪಟೂರು ಪೊಲೀಸ್ ಠಾಣೆಯಲ್ಲಿ‌ ದೂರು ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ತ್ರಿವರ್ಣಧ್ವಜ ಯಾತ್ರೆಗೆ ಸಾವಿರಾರು ಮಕ್ಕಳು ಪಾಲ್ಗೊಂಡಿದ್ದರು. 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರು ಪಾಲ್ಗೊಂಡಿದ್ದರು. ಈ ಮೆರವಣಿಗೆಯಲ್ಲಿ‌ ರಾಷ್ಟ್ರಧ್ವಜಕ್ಕಿಂತ ಮೇಲೆ ಎಬಿವಿಪಿ ಧ್ವಜವನ್ನು ಹಿಡಿದು ಸಚಿವ ನಾಗೇಶ್ ಮೆರವಣಿಗೆ ಎದುರು ಸಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ರಾಷ್ಟ್ರದ್ರೋಹಕ್ಕೆ ಸಮನಾದ ಅಪರಾಧವಾಗಿದೆ. ಹಾಗಾಗಿ ಈ ಬಗ್ಗೆ ಸೂಕ್ತ ತನಿಖೆ‌ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್​ನಿಂದ ದೂರು ನೀಡಲಾಗಿದೆ ಎಂದು ಕಾಂಗ್ರೆಸಿಗರು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ‌ ಜಾಲತಾಣದಲ್ಲಿಯೂ ವಿರೋಧ ವ್ಯಕ್ತವಾಗಿದೆ. ರಾಷ್ಟ್ರಧ್ವಜಕ್ಕಿಂತ ಮೇಲೆ‌‌ ಎಬಿವಿಪಿ ಬಾವುಟ ಹಿಡಿದಿರುವುದು ತಪ್ಪು. ಶಿಕ್ಷಣ ಸಚಿವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲೇ ಹೀಗೆ ಮಾಡಿದರೆ ಹೇಗೆ ಎಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸಚಿವರು ಭಾಗಿಯಾಗಿರುವ ಕಾರ್ಯಕ್ರಮದ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದ್ರೆ ಅವರು ಎಬಿವಿಪಿ ಧ್ವಜ ಹಿಡಿಯದೇ ಇರೋದು ಸ್ಪಷ್ಟವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments