Webdunia - Bharat's app for daily news and videos

Install App

ಸಚಿವ ನಾಗೇಶ್ ವಿರುದ್ಧ ಕಾಂಗ್ರೆಸ್ ದೂರು

Webdunia
ಶುಕ್ರವಾರ, 12 ಆಗಸ್ಟ್ 2022 (17:29 IST)
ತ್ರಿವರ್ಣ ಧ್ವಜಕ್ಕಿಂತ ಮೇಲೆ ಎಬಿವಿಪಿ‌ ಧ್ವಜ ಹಿಡಿದು ಶಿಕ್ಷಣ ಸಚಿವ ಬಿ.ಸಿ ‌ನಾಗೇಶ್ ಮೆರವಣಿಗೆಯಲ್ಲಿ ಸಾಗಿದ್ದಾರೆಂಬ ವಿಷಯ ಸಾಕಷ್ಟು ಚರ್ಚೆಗೆ ಒಳಪಟ್ಟಿದೆ. ಈ ಕುರಿತಂತೆ ಸಚಿವರ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಿಪಟೂರು ಪೊಲೀಸ್ ಠಾಣೆಯಲ್ಲಿ‌ ದೂರು ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ತ್ರಿವರ್ಣಧ್ವಜ ಯಾತ್ರೆಗೆ ಸಾವಿರಾರು ಮಕ್ಕಳು ಪಾಲ್ಗೊಂಡಿದ್ದರು. 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರು ಪಾಲ್ಗೊಂಡಿದ್ದರು. ಈ ಮೆರವಣಿಗೆಯಲ್ಲಿ‌ ರಾಷ್ಟ್ರಧ್ವಜಕ್ಕಿಂತ ಮೇಲೆ ಎಬಿವಿಪಿ ಧ್ವಜವನ್ನು ಹಿಡಿದು ಸಚಿವ ನಾಗೇಶ್ ಮೆರವಣಿಗೆ ಎದುರು ಸಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ರಾಷ್ಟ್ರದ್ರೋಹಕ್ಕೆ ಸಮನಾದ ಅಪರಾಧವಾಗಿದೆ. ಹಾಗಾಗಿ ಈ ಬಗ್ಗೆ ಸೂಕ್ತ ತನಿಖೆ‌ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್​ನಿಂದ ದೂರು ನೀಡಲಾಗಿದೆ ಎಂದು ಕಾಂಗ್ರೆಸಿಗರು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ‌ ಜಾಲತಾಣದಲ್ಲಿಯೂ ವಿರೋಧ ವ್ಯಕ್ತವಾಗಿದೆ. ರಾಷ್ಟ್ರಧ್ವಜಕ್ಕಿಂತ ಮೇಲೆ‌‌ ಎಬಿವಿಪಿ ಬಾವುಟ ಹಿಡಿದಿರುವುದು ತಪ್ಪು. ಶಿಕ್ಷಣ ಸಚಿವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲೇ ಹೀಗೆ ಮಾಡಿದರೆ ಹೇಗೆ ಎಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸಚಿವರು ಭಾಗಿಯಾಗಿರುವ ಕಾರ್ಯಕ್ರಮದ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದ್ರೆ ಅವರು ಎಬಿವಿಪಿ ಧ್ವಜ ಹಿಡಿಯದೇ ಇರೋದು ಸ್ಪಷ್ಟವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments