Select Your Language

Notifications

webdunia
webdunia
webdunia
webdunia

ಪರಿಶಿಷ್ಟರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ : ಸುಧಾಕರ್

ಪರಿಶಿಷ್ಟರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ : ಸುಧಾಕರ್
ಚಿಕ್ಕಬಳ್ಳಾಪುರ , ಗುರುವಾರ, 27 ಏಪ್ರಿಲ್ 2023 (07:40 IST)
ಚಿಕ್ಕಬಳ್ಳಾಪುರ : ಸತತ 60 ವರ್ಷಗಳ ಕಾಲ ಪರಿಶಿಷ್ಟರ ಮತಗಳನ್ನು ಪಡೆದ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿದ ಕೊಡುಗೆ ಕೇವಲ ಶೂನ್ಯ ಎಂದು ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದ್ದಾರೆ.

ತಾಲೂಕಿನ ಅವುಲಗುರ್ಕಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸಿದೆ.

ಈ ಭಾಗದ ರೈತರು ಹೂ ಬೆಳೆಯಲು ನೀರಿನ ಸಮಸ್ಯೆ ಹಿಂದೆ ಎಷ್ಟಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಬಿಜೆಪಿ ನೀಡಿದ ಭರವಸೆಯಂತೆ ಎರಡು ವರ್ಷದಲ್ಲಿ ಕ್ಷೇತ್ರದ ಎಲ್ಲ ಕೆರೆಗಳನ್ನು ತುಂಬಿಸಲಾಗಿದೆ. ಇದರಿಂದಾಗಿ ರೈತರು ಸಮೃದ್ಧಿಯಾಗಿ ಬೆಳೆಗಳನ್ನು ಬೆಳೆಯಲು ಅನುಕೂಲವಾಗಿದೆ ಎಂದಿದ್ದಾರೆ. 

ಚಿಕ್ಕಬಳ್ಳಾಪುರದಿಂದ ಕೇತೇನಹಳ್ಳಿವರೆಗೂ ಹೋಗಲು ಈ ಹಿಂದೆ ಸಾಹಸ ಪಡಬೇಕಿತ್ತು. ಈ ಅಲ್ಪ ದೂರವನ್ನು ಕ್ರಮಿಸಲು ಸುಮಾರು ಒಂದು ಗಂಟೆ ಸಮಯ ಬೇಕಿತ್ತು. ಅಂತಹ ಕೆಟ್ಟ ರಸ್ತೆಯನ್ನು ಈಗ ದುರಸ್ತಿ ಮಾಡಲಾಗಿದೆ. ಇದೇ ದೂರವನ್ನು ಈಗ ಕೇವಲ 15 ನಿಮಿಷದಲ್ಲಿ ಸೇರಬಹುದಾಗಿದೆ. ಅಲ್ಲದೆ ಈ ಪ್ರದೇಶದ ರೈತರು ಕೃಷಿಯನ್ನು ಬಿಡುವ ಸ್ಥಿತಿಗೆ ತಲುಪಿದ್ದರು. ಆದರೆ ಈಗ ಗತ ವೈಭವಕ್ಕೆ ಮರಳುವ ಕಾಲ ಇಲ್ಲಿನ ರೈತರಿಗೆ ಬಂದಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡ್ಬೇಕು : ನಿರ್ಮಲಾ ಸೀತಾರಾಮನ್