Select Your Language

Notifications

webdunia
webdunia
webdunia
webdunia

ಪೇದೆಯ ಮೇಲೆ ಕಾಂಗ್ರೆಸ್ ಕಾರ್ಪೋರೇಟರ್‌ನಿಂದ ಹಲ್ಲೆ

ಕಾಂಗ್ರೆಸ್
ದಾವಣಗೆರೆ , ಶನಿವಾರ, 6 ಆಗಸ್ಟ್ 2016 (14:57 IST)
ಹಿರಿಯ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ಡಿವೈಎಸ್‌ಪಿ ಎಂ.ಕೆ.ಗಣಪತಿ ಹಾಗೂ ಕಲ್ಲಪ್ಪ ಹಂಡಿಭಾಗ್ ಪ್ರಕರಣಗಳು ಕಣ್ಣ ಮುಂದಿರುವಾಗಲೇ ಕರ್ತವ್ಯ ನಿರತ ಪೇದೆಯ ಮೇಲೆ ಕಾಂಗ್ರೆಸ್ ಸದಸ್ಯನಿಂದ ಹಲ್ಲೆ ನಡೆದಿರುವ ಘಟನೆ ದಾವಣಗೆರೆಯಲ್ಲಿ ವರದಿಯಾಗಿದೆ.
 
ಟ್ರಾಫಿಕ್ ಪೊಲೀಸ್ ಆಗಿ ಸೇವೆ ಸಲ್ಲಿಸುತ್ತಿರುವ ಮಹಮದ್ ಅಲಿ ಎಂಬ ಪೇದೆಯ ಮೇಲೆ 13 ನೇಯ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಚಮನ್ ಸಾಬ್ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.
 
ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯ ಚಮನ್ ಸಾಬ್, ಪೊಲೀಸ್ ಪೇದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಒತ್ತುವರಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಬಿಬಿಎಂಪಿ ಆಯುಕ್ತ