ಬಿಜೆಪಿ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಅಸ್ತ್ರ

Webdunia
ಶನಿವಾರ, 6 ಮೇ 2023 (13:12 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಭ್ರಷ್ಟಾಚಾರದ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಪ್ರಕಟಿಸಿ, ಡಬಲ್ ಎಂಜಿನ್ ಸರ್ಕಾರವನ್ನು ಟ್ರಬಲ್ ಎಂಜಿನ್ ಸರ್ಕಾರ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.
 
ವಿವಿಧ ಇಲಾಖೆಗಳ ನೇಮಕಾತಿ ದರ ಪ್ರಕಟಿಸಿ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ಕೊಟ್ಟಿದೆ. 40 ಪರ್ಸೆಂಟ್ ಸರ್ಕಾರದಲ್ಲಿ ಎಲ್ಲವೂ ಮಾರಾಟವಾಗಿದೆ. ನೇಮಕಾತಿಗಳಲ್ಲಿ ಅಕ್ರಮ, ಸಿಎಂ ಸ್ಥಾನಕ್ಕೂ ದರ ನಿಗದಿಯಾಗಿದೆ ಎಂದು ಕುಹಕವಾಡಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ ಮಾಡಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ಎಐಸಿಸಿ ನಾಯಕರು ಸಹ ರೇಟ್ ಕಾರ್ಡ್ ಬಿಡುಗಡೆ ಮಾಡಿ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರ, ಇಂದು ಅತ್ಯಂತ ಮಹತ್ವದ ದಿನ. ಬಿಜೆಪಿ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ.

ಕರ್ನಾಟಕದ ಜನ ಮಾತ್ರ ಪದೇ ಪದೇ ಎಲ್ಲ ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಕರ್ನಾಟಕದ ಜನರಿಗೆ ಗೊತ್ತಿದೆ. ಬಿಜೆಪಿಯವರಿಗೂ ರೇಟ್ ಕಾರ್ಡ್ ಬಗ್ಗೆ ಗೊತ್ತಿದೆ. 40% ಅಲ್ಲ 50% ಕಮಿಷನ್ ನಡೆಯುತ್ತಿದೆ ಎಂಬುದು ವಾಸ್ತವ ಅಂಶ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಹೆಲ್ಮೆಟ್ ಯಾಕೆ ಹಾಕಿಲ್ಲ ಎಂದು ಕೇಳಿದ್ದಕ್ಕೆ ವ್ಯಕ್ತಿಯ ಉತ್ತರ ನೋಡಿ ಪೊಲೀಸರೇ ದಂಗಾದ್ರು Video

ಬೆಕ್ಕು ಸಾಕುವುದು ಬೇಡವೆಂದ ಮನೆಯವರು, ಜೀವಕ್ಕೆ ಕುತ್ತು ತಂದುಕೊಂಡ ಎಂಬಿಬಿಎಸ್‌ ವಿದ್ಯಾರ್ಥಿನಿ

ಇಸ್ರೇಲ್ ಮೇಲೆ ಮತ್ತೇ ಇರಾನ್ ದಾಳಿ, 100ಕ್ಕೂ ಅಧಿಕ ಮಂದಿಗೆ ಗಾಯ

ದಾವಣಗೆರೆ ದಕ್ಷಿಣ ಉಪಚುನಾವಣೆ, ಗುದ್ದಾಟದ ನಡುವೆ ಕೊನೆಗೂ ಕಾಂಗ್ರೆಸ್ ಟಿಕೆಟ್ ಘೋಷಣೆ

ಮುಂದಿನ ಸುದ್ದಿ
Show comments