Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿಲ್ಲ : ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿಲ್ಲ : ಬಸವರಾಜ ಬೊಮ್ಮಾಯಿ
ಬೀದರ್ , ಶುಕ್ರವಾರ, 21 ಏಪ್ರಿಲ್ 2023 (11:46 IST)
ಬೀದರ್ : ಕಾಂಗ್ರೆಸ್ 50 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡೋಕೆ ಆಗಿಲ್ಲ. ಇದೀಗ ಕಾಂಗ್ರೆಸ್ ಲಿಂಗಾಯತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದೆ. ಅವರಿಗೆ ಯಾವ ನೈತಿಕ ಹಕ್ಕಿದೆ? ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.
 
ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ಬೀದರ್ನ ಭಾಲ್ಕಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ, ಲಿಂಗಾಯತರು ಅಷ್ಟೇ ಅಲ್ಲಾ, ಎಲ್ಲಾ ಸಮುದಾಯಕ್ಕೆ ಮಾಡಿದ್ದನ್ನು ತಿಳಿಸಬೇಕಿದೆ.

ನಾವು ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತೇವೆ. ಆದರೆ ನಾಯಕತ್ವ ಯಾರು ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. 50 ವರ್ಷದಿಂದ ನಿಜಲಿಂಗಪ್ಪ ಬಳಿಕ ಕಾಂಗ್ರೆಸ್ನಲ್ಲಿ ಲಿಂಗಾಯತರು ಯಾರೂ ಸಿಎಂ ಆಗಲಿಲ್ಲ. ವೀರೇಂದ್ರ ಪಾಟೀಲ್ಗೆ 9 ತಿಂಗಳಲ್ಲೇ ಹೀನಾಯವಾಗಿ ತೆಗೆದಿದ್ದರು ಎಂದು ಕಾಂಗ್ರೆಸ್ ನಾಯಕರಿಗೆ ಸಿಎಂ ತೀರುಗೇಟು ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ ಹೊತ್ತಿನಲ್ಲೇ ಶಿವಕುಮಾರ್ ಗೆ ಶಾಕ್