Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷಕ್ಕೂ ವೀರಶೈವ ವಿವಾದಕ್ಕೂ ಸಂಬಂಧವಿಲ್ಲ: ಉಗ್ರಪ್ಪ

ಕಾಂಗ್ರೆಸ್ ಪಕ್ಷಕ್ಕೂ ವೀರಶೈವ ವಿವಾದಕ್ಕೂ ಸಂಬಂಧವಿಲ್ಲ: ಉಗ್ರಪ್ಪ
ಬೆಂಗಳೂರು , ಭಾನುವಾರ, 17 ಸೆಪ್ಟಂಬರ್ 2017 (14:48 IST)
ಕಾಂಗ್ರೆಸ್ ಪಕ್ಷಕ್ಕೂ ವೀರಶೈವ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೆಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ, ಬಿಜೆಪಿ ಪ್ರಯತ್ನಗಳು ವಿಫಲವಾಗಲಿವೆ. ರಾಜ್ಯದ ಜನತೆಗೆ ಸತ್ಯ ಏನೆಂದು ತಿಳಿದಿದೆ ಎಂದರು.
 
ಧರ್ಮಗಳನ್ನು ಒಡೆದು ಆಳುವುದು ಕಾಂಗ್ರೆಸ್ ಕಾಯಕವಲ್ಲ. ಅದು ಬಿಜೆಪಿ ಕಾಯಕ. ಮೊದಲಿನಿಂದಲೂ ಬಿಜೆಪಿ ಇದನ್ನೇ ಮಾಡುತ್ತಿದೆ ಎಂದು ಆರೋಪಿಸಿದರು.
 
ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿದ್ರಾವಸ್ಥೆಯಲ್ಲಿದ್ದರು. ಇದೀಗ ಅಮಿತ್ ಶಾ ಬಂದು ಕೀ ಕೊಟ್ಟು ಹೋಗಿದ್ದರಿಂದ ಎಚ್ಚೆತ್ತು ಸರಕಾರದ ವಿರುದ್ಧ ಅನಗತ್ಯವಾಗಿ ಹೋರಾಟಕ್ಕೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಹಂತಕರ ಬಂಧನಕ್ಕೆ ಸರಕಾರಕ್ಕೆ ಡೆಡ್‌ಲೈನ್