Select Your Language

Notifications

webdunia
webdunia
webdunia
webdunia

15 ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲ್ಲುವುದಿಲ್ಲ- ಡಿಸಿಎಂ ಅಶ್ವಥ್ ನಾರಾಯಣ ವ್ಯಂಗ್ಯ

15 ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲ್ಲುವುದಿಲ್ಲ- ಡಿಸಿಎಂ ಅಶ್ವಥ್ ನಾರಾಯಣ ವ್ಯಂಗ್ಯ
ಮಂಡ್ಯ , ಶುಕ್ರವಾರ, 22 ನವೆಂಬರ್ 2019 (11:30 IST)
ಮಂಡ್ಯ : ಕಾಂಗ್ರೆಸ್ –ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲ . ಈಗಾಗಲೇ ಎರಡು ಪಕ್ಷಗಳ ನಡುವೆ ವಾರ್ ಡಿಕ್ಲೇರ್ ಆಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದ್ದಾರೆ.



ಮಂಡ್ಯದ ಕೆ.ಆರ್.ಪೇಟೆಯಲ್ಲಿ ನಾರಾಯಣಗೌಡರ ಪರ ಪ್ರಚಾರ ಮಾಡುತ್ತಿರುವ ಡಿಸಿಎಂ ಅಶ್ವಥ್ ನಾರಾಯಣ ಈ  ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಏಕಾಂಗಿಯಾಗಿದ್ದಾರೆ. ಸಿದ್ದರಾಮಯ್ಯನ ವಿರುದ್ಧ ಕಾಂಗ್ರೆಸ್ ಸಮರ ಸಾರುತ್ತಿದೆ. ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರದಲ್ಲಿಯೂ ಗೆಲ್ಲುವುದಿಲ್ಲ ಎಂದು ಅವರು ಸವಾಲು ಹಾಕಿದ್ದಾರೆ.


ನಾವು 6 ಸ್ಥಾನ ಗೆದ್ದರೆ ಸಾಕು, 8 ಸ್ಥಾನ ಬೇಕಾಗಿಲ್ಲ. ಆದ್ರೆ ನಾವು 15 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸ್ತೇವೆ. ಈಗಿರುವುದು 222 ಶಾಸಕರು, ನಮಗೆ ಲೆಕ್ಕ ಗೊತ್ತಿಲ್ವಾ?  ಎಂದು ಸಿದ್ದರಾಮಯ್ಯ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಗೋಪಾಲಯ್ಯ