Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ: ಯಡಿಯೂರಪ್ಪ

ಕಾಂಗ್ರೆಸ್ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ: ಯಡಿಯೂರಪ್ಪ
ಶಿವಮೊಗ್ಗ , ಶನಿವಾರ, 8 ಏಪ್ರಿಲ್ 2017 (20:43 IST)
ರೈತ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಅವರ ಕುಟುಂಬದ ನೆರವಿಗೆ 1 ಲಕ್ಷ ರೂಪಾಯಿ ಹಣ ನೀಡಿದ್ದೆ. ಆದರೆ, ಕಾಂಗ್ರೆಸ್ಸಿನವರು ನನ್ನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸುವ ಮೂಲಕ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆರೋಪಿಸಿದ್ದಾರೆ.

ಇದೇವೇಳೆ, ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಕಾಂಗ್ರೆಸ್`ನ ಸಚಿವರು ಚಾಮರಾಜನಗರದ ಗಡಿಯಲ್ಲೇ ಬೀಡುಬಿಟ್ಟಿದ್ದು, ನಾಳೆ ಬೆಳಗ್ಗೆವರೆಗೂ ಹಣ ಹಂಚಲಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ. ಇಂತಹ ಚುನಾವಣೆಯನ್ನ ನನ್ನ ಜೀವಮಾನದಲ್ಲಿ ನೋಡಿಲ್ಲ.  ಹಣದ ಮೂಲಕ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರಗಳಲ್ಲಿ ನಾಳೆ ಉಪಚುನಾವಣಾ ಮತದಾನ ನಡೆಯಲಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಕ್ಷೇತ್ರಕ್ಕೆ 89 ಕೋಟಿ ರೂ. ಹಂಚಿಕೆ..? ಸ್ಫೋಟಕ ಮಾಹಿತಿ ಬಹಿರಂಗ