Webdunia - Bharat's app for daily news and videos

Install App

ಅಡ್ರೆಸ್‌ ಗೆ ಇಲ್ಲದ ಪಕ್ಷದಿಂದ ಕಲಿಯಬೇಕಿಲ್ಲ: ಅಶ್ವಥ್‌ ನಾರಾಯಣ್‌

Webdunia
ಬುಧವಾರ, 4 ಮೇ 2022 (17:51 IST)
ಅಡ್ರೆಸ್‌ ಇಲ್ಲದವರ ಪಕ್ಷದಿಂದ ನಾನೇನು ಕಲಿಯಬೇಕಾಗಿಲ್ಲ. ದಾಖಲೆ ಇಲ್ಲದೇ ಸುಮ್ಮನೆ ಆರೋಪ ಮಾಡಿದರೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಸಚಿವ ಅಶ್ವಥ್‌ ನಾರಾಯಣ್‌ ಕಾಂಗ್ರೆಸ್‌ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
ಪಿಎಸ್‌ ಐ ನೇಮಕಾತಿ ಅಕ್ರಮದಲ್ಲಿ ಅಶ್ವಥ್‌ ನಾರಾಯಣ್‌ ಪಾತ್ರವಿಲ್ಲದೆ. ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅಶ್ವಥ್‌ ನಾರಾಯಣ್‌, ಜೈಲಿಗೆ ಹೋಗಿ ಬಂದವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರ ಸಹವಾಸ ಮಾಡಿ ಸಿದ್ದರಾಮಯ್ಯ ಕೂಡ ಮಾತನಾಡುತ್ತಿದ್ದಾರೆ ಎಂದರು.
ನಾನು ಭ್ರಷ್ಟಾಚಾರ ಮಾಡಲು ರಾಜಕೀಯಕ್ಕೆ ಬಂದಿಲ್ಲ. ನನಗೆ ಅದರ ಅಗತ್ಯವೂ ಇಲ್ಲ. ಯಾರಿಗೂ ನಾನು ನೆರವು ನೀಡಿಲ್ಲ. ಪಿಎಸ್‌ ಐ ಅಕ್ರಮದ ಆರೋಪ ಬಂದ ೨ ಗಂಟೆಯಲ್ಲೇ ನಮ್ಮ ಸರಕಾರ ತನಿಖೆಗೆ ಆದೇಶ ನೀಡಿದೆ. ಆದರೂ ನಮ್ಮ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ತನಿಖೆ ಮುಚ್ಚಿ ಹಾಕುವುದಕ್ಕೆ ನಾವೇ ಕಾಂಗ್ರೆಸನವರಲ್ಲ. ಯಾವ ಆಧಾರದ ಮೇಲೆ ಅವರು ಹೇಳಿಕೆಗಳನ್ನ ಕೊಟ್ಟಿದ್ದಾರೆ ಅನ್ನೋದನ್ನ ಮಾಧ್ಯಮದವರು ಪರಿಶೀಲಿಸಬೇಕು. ಉತ್ತಮವಾದ ವ್ಯಕ್ತಿ ಮೇಲೆ ಈ ರೀತಿ ನಿರಾಧರವಾಗಿ ಆರೋಪ ಮಾಡುವುದನ್ನ ಖಂಡಿಸುತ್ತೇನೆ ಎಂದು ಅಶ್ವಥ್‌ ನಾರಾಯಣ್‌ ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ