Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಪ್ರವೃತ್ತಿ: ಅಶ್ವಥ್ ನಾರಾಯಣ್ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಪ್ರವೃತ್ತಿ: ಅಶ್ವಥ್ ನಾರಾಯಣ್ ಆರೋಪ
ಬೆಂಗಳೂರು , ಶನಿವಾರ, 13 ಫೆಬ್ರವರಿ 2016 (18:27 IST)
ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಪ್ರವೃತ್ತಿ ಮುಂದಿವರಿದಿದೆ ಎಂದು  ವಿಧಾನಪರಿಷತ್ ಬಿಜೆಪಿ ಸದಸ್ಯ ಅಶ್ವಥ್ ನಾರಾಯಣ್ ಆರೋಪಿಸಿದರು. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡುತ್ತಿದ್ದ ಅವರು, ಜಿ.ಪಂ. ತಾ.ಪಂ ಚುನಾವಣೆ ವೇಳೆ ಹಣ ಹಂಚುವಾಗ ಹೆಬ್ಬಳ್ಳಿ ಜಿಪಂ ಕ್ಷೇತ್ರದ ಅಭ್ಯರ್ಥಿ ಯೋಗೀಶ್ ಗೌಡರಿಗೆ  ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಸಿಕ್ಕಿಬಿದ್ದಿದ್ದರು.

ಹಣ ಹಂಚಿಕೆ ಕುರಿತು ಸಚಿವರನ್ನು ಪ್ರಶ್ನಿಸಿದಾಗ ಯೋಗೀಶ್ ಗೌಡರನ್ನು ಬಂಧಿಸಲಾಗಿದೆ ಎಂದು ಅಶ್ವಥ್ ನಾರಾಯಣ್ ಆರೋಪಿಸಿದರು. ಸಚಿವ ವಿನಯ್ ಕುಲಕರ್ಣಿ ರಾಜೀನಾಮೆಗೆ ಅವರು ಒತ್ತಾಯಿಸಿದರು.  ಘಟನೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದರು.

ಈ ನಡುವೆ ಧಾರವಾಡ ಡಿಸಿ ಕಚೇರಿಗೆ ನುಗ್ಗಲು ಯತ್ನಿಸಿದ ಶೆಟ್ಟರ್ ಮತ್ತು ಜೋಷಿ ಅವರನ್ನು ಪೊಲೀಸರು ಬಂಧಿಸಿದ್ದರಿಂದ ಕಾರ್ಯಕರ್ತರ ಕೋಪ ಕೆರಳಿಸಿದೆ. 

Share this Story:

Follow Webdunia kannada