Select Your Language

Notifications

webdunia
webdunia
webdunia
webdunia

ರಾಜ್ಯದ ಭೂಪುಟದಿಂದ ಕಾಂಗ್ರೆಸ್ ಅಳಿಸಿಹಾಕುವುದೇ ಬಿಜೆಪಿ ಗುರಿ: ಮುರುಳಿ

ರಾಜ್ಯದ ಭೂಪುಟದಿಂದ ಕಾಂಗ್ರೆಸ್ ಅಳಿಸಿಹಾಕುವುದೇ ಬಿಜೆಪಿ ಗುರಿ: ಮುರುಳಿ
ಬೆಂಗಳೂರು , ಗುರುವಾರ, 27 ಆಗಸ್ಟ್ 2015 (16:13 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ದುರಾಡಳಿತದಿಂದಾಗಿಯೇ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಿದೆ ಎಂದು ರಾಜ್ಯದ ಉಸ್ತುವಾರಿ ಹೊತ್ತಿರುವ ಬಿಜೆಪಿ ಮುಖಂಡ ಮುರಳಿಧರ್ ಹೇಳಿದ್ದಾರೆ.
 
ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಪಕ್ಷ 100 ಸ್ಥಾನಗಳನ್ನು ಕಬಳಿಸುವ ಮೂಲಕ ರಾಜ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದರೂ ರಾಜ್ಯ ಸರಕಾರ ಮಾತ್ರ ಕುಂಭಕರ್ಣ ನಿದ್ರೆಯಲ್ಲಿದೆ. ಕೇವಲ ಅಶ್ವಾಸನೆಗಳನ್ನು ನೀಡುವುದರಲ್ಲಿಯೇ ಕಾಲ ಕಳೆಯುತ್ತಿದೆ. ರೈತರಿಗೆ ಶಾಶ್ವತವಾಗಿ ಅನುಕೂಲವಾಗುವಂತಹ ವಾತಾವರಣ ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು.
 
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಮುಂದುವರಿದಿದ್ದರೂ ಕಾಂಗ್ರೆಸ್ ನಾಯಕರು ಬೇರೆ ರಾಜ್ಯಗಳತ್ತ ಬೊಟ್ಟು ಮಾಡಿ ತೊರಿಸುತ್ತಿರುವುದು ವಿಷಾದಕರ ಸಂಗತಿಯಾಗಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ಹುಟುಕಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ನಾಯಕ ಮುರಳಿಧರ್ ಎಚ್ಚರಿಕೆ ನೀಡಿದ್ದಾರೆ.   

Share this Story:

Follow Webdunia kannada