Webdunia - Bharat's app for daily news and videos

Install App

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ಕ್ಷಾಮ ತಂದಿರಿಸಿದೆ : ಬೊಮ್ಮಾಯಿ

Webdunia
ಮಂಗಳವಾರ, 5 ಸೆಪ್ಟಂಬರ್ 2023 (08:44 IST)
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಂದಿಟ್ಟಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಕಡೆ ಅಘೋಷಿತ ಲೋಡ್ ಶೆಡ್ಡಿಂಗ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ಮಾತ್ರ ಅಲ್ಲ ಇಡೀ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗ್ತಿದೆ. ರೈತರಿಗೆ ಕೇವಲ 3 ಗಂಟೆ ವಿದ್ಯುತ್ ಕೊಡುತ್ತಿದ್ದಾರೆ. ಅದೂ ರಾತ್ರಿ 12 ರಿಂದ 3 ಗಂಟೆಗೆ ಕರೆಂಟ್ ಸಿಗುತ್ತಿದೆ. ಇದಕ್ಕೆ ಸರ್ಕಾರ ಕಾರಣ. ವಿದ್ಯುತ್ ಕ್ಷೇತ್ರಕ್ಕೆ ಸರ್ಕಾರದಿಂದ ಸಂಪೂರ್ಣ ಬೆಂಬಲ ಸಿಗುತ್ತಿಲ್ಲ. ಹೀಗಾಗಿ ವಿದ್ಯುತ್ ಕೊರತೆ ಇದೆ ಎಂದು ತಿಳಿಸಿದರು.

ನಾವು ಇದ್ದಾಗ ಬೇಸಿಗೆ ಇದ್ದಾಗಲೂ ಲೋಡ್ ಶೆಡ್ಡಿಂಗ್ ಮಾಡಿರಲಿಲ್ಲ. ನಾವು ಕಾಲ ಕಾಲಕ್ಕೆ ವಿದ್ಯುತ್ ಕ್ಷೇತ್ರಕ್ಕೆ ಸಾಕಷ್ಟು ಸಹಕಾರ ನೀಡಿದ್ದೆವು. ಆದರೆ ಈ ಸರ್ಕಾರ ನಿರ್ವಹಣೆಯಲ್ಲಿ ಎಡವಿದ್ದಾರೆ. ರಾಜ್ಯದ ಆರ್ಥಿಕ ನಿರ್ವಹಣೆ ಸರಿಯಿಲ್ಲ ಎಂದು ಇದು ತೋರಿಸುತ್ತದೆ.

ವಿದ್ಯುತ್ ಉತ್ಪಾದಕರಿಗೆ ದುಡ್ಡು ಕೊಡುತ್ತಿಲ್ಲ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ತರಲು ಹಣ ಕೊಡುತ್ತಿಲ್ಲ. ಥರ್ಮಲ್ ಪ್ಲ್ಯಾಂಟ್ಗಳಲ್ಲಿ 100% ವಿದ್ಯುತ್ ಪೂರ್ಣ ಉತ್ಪತ್ತಿ ಮಾಡುತ್ತಿಲ್ಲ. ಹೊರಗೆ ಕರೆಂಟ್ ಖರೀದಿಗೆ ಮುಂದಾಗಿದ್ದಾರೆ. ಆದರೆ ಹಣ ಇಲ್ಲ ಎಂದು ವಾಗ್ದಾಳಿ ನಡೆಸಿದರು. 

ಈ ಸರ್ಕಾರದಲ್ಲಿ ಹಣಕಾಸಿನ ವ್ಯವಸ್ಥೆ ಸರಿಯಿಲ್ಲದೆ ಹೀಗೆ ಆಗಿದೆ. ರಾಜ್ಯದಲ್ಲಿ ವಿದ್ಯುತ್ ಕ್ಷಾಮ ಆವರಿಸಿದೆ. ಮಳೆಯಿಲ್ಲದೆ ರಾಜ್ಯದಲ್ಲಿ ಈಗ ಕೃಷಿ ಬರ ಇದೆ. ನೀರಿನ ಬರ ಇದೆ. ಇದರ ಜೊತೆಗೆ ಈಗ ವಿದ್ಯುತ್ ಬರ ಕೂಡಾ ರಾಜ್ಯಕ್ಕೆ ಬಂದಿದೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments