Select Your Language

Notifications

webdunia
webdunia
webdunia
webdunia

ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ : ಪರಮೇಶ್ವರ್

ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ : ಪರಮೇಶ್ವರ್
ತುಮಕೂರು , ಶುಕ್ರವಾರ, 30 ಜೂನ್ 2023 (13:17 IST)
ತುಮಕೂರು : ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ನಿಮ್ಮ ಆಶೀರ್ವಾದದಿಂದ ನಾನು ಗೃಹಸಚಿವನಾಗಿದ್ದೇನೆ. ಆ ದೇವರ ಆಶೀರ್ವಾದ ಇಲ್ಲದೇ ಇದ್ದರೆ ನಾನು ಶಾಸಕನಾಗುತ್ತಿರಲಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಗುರುವಾರ ಮುಸ್ಲಿಂ ಭಾಂಧವರ ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಕೊರಟಗೆರೆ ಪಟ್ಟಣದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಶುಭ ಕೋರಿದರು. ಈ ವೇಳೆ ಧಾರ್ಮಿಕ ಮುಖಂಡರು ಪರಮೇಶ್ವರ್ ಅವರಿಗೆ ಟೋಪಿ ಧಾರಣೆ ಮಾಡಿ ಸಿಎಂ ಆಗಲಿ ಎಂದು ಶುಭಹಾರೈಸಿದರು.
 -
ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಬಕ್ರಿದ್ ಹಬ್ಬ ತ್ಯಾಗ ಬಲಿದಾನದ ಸಂಕೇತ. ಅಲ್ಲಾ ಬೇರೆ ಬೇರೆ ರೀತಿಯಲ್ಲಿ ಪರೀಕ್ಷೆ ಮಾಡುತ್ತಾನಂತೆ. ತನ್ನ ಮಗನನ್ನೂ ಬಲಿ ಕೊಡಬೇಕು ಎನ್ನುವ ತ್ಯಾಗ ದೊಡ್ಡದು. ರಂಜಾನ್ ವೇಳೆ ಇಲ್ಲಿಗೆ ಬಂದಿದ್ದೆ. ಆಗ ಚುನಾವಣೆ ಇತ್ತು. ಈ ಸಂದರ್ಭ ನಾನು ಬಂದು ಮತ ಕೇಳಿದ್ದೆ. ನನ್ನನ್ನು ಗೆಲ್ಲಿಸಿದ್ದೀರಿ ಎಂದರು. 

ಮಹಮ್ಮದ್ ಇಬ್ರಾಹಿಂ ತನ್ನ ಮಗನನ್ನೇ ಅಲ್ಲಾನಿಗೆ ಬಲಿ ಕೊಟ್ಟಿದ್ದ. ಅಂತಹ ಮಹಾನ್ ಬಲಿದಾನದ ಸಂಕೇತ ಬಕ್ರಿದ್. ಎಲ್ಲರಿಗೂ ಶುಭಕಾಮನೆ ಹೇಳಿದ್ದೇನೆ. ಭಾರತ ಶಾಂತಿ ನಂಬಿದ ದೇಶ. ಸಂವಿಧಾನದಲ್ಲೇ ಅದನ್ನು ಅಳವಡಿಸಿಕೊಂಡಿದ್ದೇವೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

3 ತಿಂಗಳು ಅಕ್ಕಿ ಬದಲು ಹಣ ಕೊಡುತ್ತೇವೆ : ಪರಮೇಶ್ವರ್