ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಹಕ್ಕಿಲ್ಲ: ಯಡಿಯೂರಪ್ಪ

Sampriya
ಬುಧವಾರ, 2 ಏಪ್ರಿಲ್ 2025 (19:19 IST)
Photo Courtesy X
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುವವರೆಗೆ ರಾಜ್ಯದ ಉದ್ದಗಲಕ್ಕೆ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಆರಂಭವಾದ ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸರಕಾರವು ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿದೆ. ನೀರಾವರಿ ಕಾರ್ಯಗಳನ್ನು ಮಾಡುತ್ತಿಲ್ಲ; ಸರಕಾರವು ಬೆಲೆ ಏರಿಕೆ ಮೂಲಕ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ತಿಳಿಸಿದರು.

ನಾವೆಲ್ಲರೂ ರಾಜ್ಯದ ಉದ್ದಗಲಕ್ಕೆ ಪ್ರವಾಸ ಮಾಡುತ್ತೇವೆ. ಈ ಸರಕಾರವು ಜನಹಿತವನ್ನು ಮರೆತು ಒಂದು ರೀತಿ ತುಘಲಕ್ ದರ್ಬಾರ್ ಮಾಡುತ್ತಿದ್ದು, ಇದನ್ನು ನಾವು- ನೀವು ಸೇರಿ ಖಂಡಿಸಬೇಕಿದೆ ಎಂದು ತಿಳಿಸಿದರು. ಸಿದ್ದರಾಮಯ್ಯನವರ ಸರಕಾರಕ್ಕೆ ಜನಹಿತವು ಮುಖ್ಯವಲ್ಲ; ಈ ಸರಕಾರ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯದಂತೆ ನೋಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಅಜೀರ್ಣ ಆಗುವಷ್ಟು ಬಹುಮತವಿರುವ ಈ ಸರಕಾರ ಜನಹಿತವನ್ನು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣ ಮರೆತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಇಲ್ಲಿ ನಿರೀಕ್ಷೆಗೂ ಮೀರಿ ಜನರು, ಮಹಿಳೆಯರು ಸೇರಿದ್ದಾರೆ ಎಂದು ಅವರು ಹೇಳಿದರು.

ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ಉಸಿರುಕಟ್ಟುವ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಮನೆಮನೆಗೆ ತೆರಳಿ ಜನಜಾಗೃತಿ ಮೂಡಿಸಬೇಕು; ಈ ಸರಕಾರಕ್ಕೆ ಪಾಠ ಕಲಿಸಬೇಕು, ಅಧಿಕಾರ ಬಿಟ್ಟು ತೊಲಗುವಂತೆ ಹೇಳಬೇಕಿದೆ ಎಂದು ಅವರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments