ಕೋಮಾದಲ್ಲಿರುವ ಕಾಂಗ್ರೆಸ್‌ ಸರ್ಕಾರದಿಂದ ಆಗುತ್ತಿಲ್ಲ ಅಭಿವೃದ್ಧಿ: ಆರ್‌.ಅಶೋಕ್

Sampriya
ಬುಧವಾರ, 4 ಸೆಪ್ಟಂಬರ್ 2024 (19:25 IST)
ಬೆಂಗಳೂರು: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದ್ದು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿದ್ದು, ಜನರು ವಾಹನ ಚಲಾಯಿಸಲು ಪರದಾಡುವಂತಾಗಿದೆ. ಕಾಂಗ್ರೆಸ್ ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಕೊಡಲಿ ಎಂದು ಆಕ್ರೋಶ ಹೊರಹಾಕಿದರು.

ಬೆಂಗಳೂರಿನಲ್ಲಿ ಕಮಿಷನ್ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ‍್ಯಾಂಡ್ ಬೆಂಗಳೂರಾಗಿದೆ ಎಂದು ದೂರಿದರು.

ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಅತ್ಯಾಚಾರ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ, ಡ್ರಗ್ಸ್‌ ದಂಧೆ ಹೆಚ್ಚಾಗಿದೆ ಎಂದು ದೂರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ರೈಲು ಪ್ರಯಾಣ ವೇಳೆ ಆಹಾರ ಖರೀದಿಸಿ ತಿನ್ನುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಒಡಿಶಾದಲ್ಲಿ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದ ಬಿಲ್ಡರ್ಸ್‌, 6 ಮಂದಿ ಸಾವು

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments