Select Your Language

Notifications

webdunia
webdunia
webdunia
webdunia

ಸಂಕ್ರಾಂತಿ ಒಳಗೆ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ-ಸಿಪಿ ಯೋಗೇಶ್ವರ್

ಸಂಕ್ರಾಂತಿ ಒಳಗೆ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ-ಸಿಪಿ ಯೋಗೇಶ್ವರ್
bangalore , ಮಂಗಳವಾರ, 3 ಅಕ್ಟೋಬರ್ 2023 (16:00 IST)
ಕಾಂಗ್ರೆಸ್‌ನಲ್ಲಿ ಒಳಬೇಗುದಿ ತೀವ್ರಗೊಂಡಿದ್ದು, ಶಾಸಕರಲ್ಲಿ ಅಸಮಾಧಾನ ಹೆಚ್ಚಳಗೊಂಡಿದೆ. ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದ್ದು, ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರೋದು ಅನುಮಾನ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬಾಂಬ್ ಸಿಡಿಸಿದ್ದಾರೆ.ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆ ಗಮನಿಸಿದರೆ, ೨೦೨೩ ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆ ಇದೆ. ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಸ್ಘೋಟಿಸಲಿದ್ದು, ಸರ್ಕಾರ ಪತನಗೊಳ್ಳಲಿದೆ ಎಂದು ಅನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ನಾವು ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದು ಭವಿಷ್ಯ ನುಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಯಾರಿಗೆ ಟಿಕೆಟ್ ಕೊಟ್ರೂ ಕೆಲಸ ಮಾಡುತ್ತೆವೆ- ಕೆ ಹೆಚ್ ಮುನಿಯಪ್ಪ