ಮದ್ದೂರು ಗಲಾಟೆಯಲ್ಲಿ ಮತ್ತೆ ಹಿಂದೂಗಳನ್ನು ಕಡೆಗಣಿಸಿತಾ ಕಾಂಗ್ರೆಸ್ ಸರ್ಕಾರ

Krishnaveni K
ಬುಧವಾರ, 10 ಸೆಪ್ಟಂಬರ್ 2025 (10:24 IST)
ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯದಕ್ಕೆ ಸೇರಿದ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಹಿಂದೂಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯದ ಕಾಂಗ್ರೆಸ್ ಸರ್ಕಾರದ ನಾಯಕರ ಕೆಲವು ಮಾತುಗಳು ಮತ್ತೆ ಹಿಂದೂಗಳನ್ನು ಕೆರಳಿಸಿದೆ.

ಕಾಂಗ್ರೆಸ್ ಮುಸ್ಲಿಮರನ್ನೇ ಓಲೈಸುತ್ತದೆ ಎಂಬ ಅಪವಾದವಿದೆ. ಇದೀಗ ಮದ್ದೂರು ಗಲಾಟೆ ಬಳಿಕ ಗೃಹಸಚಿವ ಜಿ ಪರಮೇಶ್ವರ್ ಘಟನೆಗೆ ಹಿಂದೂ ನಾಯಕರೇ ಕಾರಣ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಅಂದರೆ ನಮ್ಮ ದೇವರು, ಧರ್ಮಕ್ಕೆ ಯಾರು ಏನೇ ಅಂದರೂ ನಾವು ಮಾತ್ರ ಶಾಂತಿ ಎಂದು ಸುಮ್ಮನಿರಬೇಕಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮಸೀದಿ ಮುಂದೆ ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ್ದಕ್ಕೇ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಅವರ ಹೇಳಿಕೆಯೂ ಆಕ್ರೋಶಕ್ಕೆ ಕಾರಣವಾಯಿತು. ಕಳೆದ ವರ್ಷವೂ ಮಂಡ್ಯದಲ್ಲಿ ಗಣೇಶ ಮೆರವಣಿಗೆ ಗಲಾಟೆ ವೇಳೆ ಸರ್ಕಾರ ಇದೇ ರೀತಿ ನಡೆದುಕೊಂಡಿತ್ತು. ಇಂತಹದ್ದೇ ಹೇಳಿಕೆ ಬಂದಿತ್ತು. ಇದರಿಂದಾಗಿ ಕಾಂಗ್ರೆಸ್ ಹಿಂದೂ ವಿರೋಧಿ ಎಂದು  ಬಿಜೆಪಿ ವಾಗ್ದಾಳಿ ನಡೆಸುವಂತಾಗಿತ್ತು. ಈ ಬಾರಿ ಮತ್ತೆ ಅದೇ ರೀತಿ ಆಗಿದೆ. ಇದರೊಂದಿಗೆ ಕಾಂಗ್ರೆಸ್ ಮತ್ತೊಮ್ಮೆ ಹಿಂದೂ ವಿರೋಧಿ ಹಣೆಪಟ್ಟಿ ಹೊತ್ತುಕೊಂಡಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಸ್ಲಿಮರ ನಮಾಜಿಗೂ ಪರ್ಮಿಷನ್ ಬೇಕು: ಏನೋ ಮಾಡಲು ಹೋಗಿ ಏನೋ ಆಯ್ತು ಎಂಬ ಪಬ್ಲಿಕ್

ಮುಂದಿನ ಸುದ್ದಿ
Show comments