Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಾರಂಟಿ ಮುಗಿದಿದೆ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಾರಂಟಿ ಮುಗಿದಿದೆ
bangalore , ಸೋಮವಾರ, 1 ಮೇ 2023 (16:00 IST)
ವಾರೆಂಟಿ ಮುಗಿದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್​ ಅನ್ನು ಜನ ನಂಬುವುದಿಲ್ಲ.ಬಿಜೆಪಿ ಪ್ರಣಾಳಿಕೆ ಜನರಿಗೆ ಭರವಸೆ ನೀಡುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಹೇಳಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಾರೆಂಟಿ ಮುಗಿದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಜನ ನಂಬುವುದಿಲ್ಲ. ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ಭ್ರಮೆ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ರು.. ಮಾಜಿ ಸಿಎಂ ಸಿದ್ದರಾಮಯ್ಯ ಇಡೀ ಲಿಂಗಾಯತರೇ ಭ್ರಷ್ಟರು ಅಂತ ಹೇಳಿದ್ದಾರೆ.
 
ಚುನಾವಣಾ ಸಮಯದಲ್ಲಿ ಒಂದು ಸಮುದಾಯದ ಮೇಲೆ ವೈಯಕ್ತಿಕ ಟೀಕೆ ಸರಿಯಲ್ಲ. ಮಾಜಿ ಸಿಎಂಗಳಾದ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್, J.H. ಪಾಟೀಲ್ ಭ್ರಷ್ಟರಾ ಎಂದು ಯತ್ನಾಳ್​ ಪ್ರಶ್ನಿಸಿ, ಕಿಡಿಕಾರಿದ್ರು. ಇನ್ನು ಮಾಜಿ ಸಿಎಂ H.D. ಕುಮಾರಸ್ವಾಮಿಗೆ ಲಿಂಗಾಯತರ ಮೇಲೆ ಯಾವುದೇ ಗೌರವವಿಲ್ಲ. ಕುಮಾರಸ್ವಾಮಿ ಯಾವುದೇ ಲಿಂಗಾಯತ ನಾಯಕರನ್ನು ಬೆಳೆಸಿಲ್ಲ ಎಂದು ಕಿಡಿಕಾರಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಸರ್ಪ ಆಗುವುದಾದರೆ ಸರ್ಪ ಡೇಂಜರೇ