Webdunia - Bharat's app for daily news and videos

Install App

ಭರವಸೆ ಈಡೇರಿಸಿದ ಇತಿಹಾಸವೇ ಕಾಂಗ್ರೆಸ್​ಗೆ ಇಲ್ಲ : ಕೇಂದ್ರ ಹಣಕಾಸು ಸಚಿವೆ

Webdunia
ಶುಕ್ರವಾರ, 7 ಏಪ್ರಿಲ್ 2023 (16:07 IST)
ಭರವಸೆ ಈಡೇರಿಸಿದ ಇತಿಹಾಸವೇ ಕಾಂಗ್ರೆಸ್​ಗೆ ಇಲ್ಲ. ಇಂತಹ ಕಾಂಗ್ರೆಸ್ ಈಗ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಉಚಿತ ಭರವಸೆ ನೀಡುತ್ತಿದೆ. ಅವರ ಈಡೇರಿಕೆ ಅಸಾಧ್ಯವಾಗಿದ್ದು, ಕಾಂಗ್ರೆಸ್​ನ ಭರವಸೆ ನಂಬಬೇಡಿ ಎಂದು ರಾಜ್ಯದ ಜನತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿದ್ದಾರೆ.ಮಲ್ಲೇಶ್ವರದಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಲ್ಕು ಉಚಿತ ಭರವಸೆ ನೀಡಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಉಚಿತ ಕೊಡುಗೆ ನೀಡೋದಾಗಿ ಹೇಳಿ ಕೈಕೊಟ್ಟಿದೆ. ಮಧ್ಯಪ್ರದೇಶದಲ್ಲಿ ಸಾಕಷ್ಟು ಭರವಸೆ ನೀಡಿತ್ತು.. ಸಾಲಮನ್ನಾ ಘೋಷಣೆ ಮಾಡಿತ್ತು. ಈಗ ಮತ್ತೆ ಚುನಾವಣೆ ಬರುತ್ತಿದೆ.. ಆದರೆ ಮಧ್ಯಪ್ರವೇಶ ಭರವಸೆ ಭರವಸೆಗಳಾಗಿಯೇ ಉಳಿದಿವೆಎಂದು ದೂರಿದ್ರು.ಇತರ ರಾಜ್ಯದಲ್ಲಿ ಭರವಸೆ ಈಡೇರಿಸದೇ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ 2 ಸಾವಿರ, 200 ಯೂನಿಟ್ ಉಚಿತ ವಿದ್ಯುತ್, ಯುವಕರಿಗೆ 2000 ಕೊಡೋದಾಗಿ ಹೇಳಿದ್ದಾರೆ. ಕರ್ನಾಟಕ ರಾಜ್ಯದ ಬಜೆಟ್ 3 ಲಕ್ಷ ಕೋಟಿ ಇದೆ. ಇವರು ಕೊಟ್ಟಿರೋ ಭರವಸೆ ಈಡೇರಿಕೆಗೆ ಒಂದು ಲಕ್ಷ ಕೋಟಿ ಬೇಕು. ಉಳಿದ ಎರಡು ಲಕ್ಷ ಕೋಟಿಯಲ್ಲಿ ಸರ್ಕಾರ ನಡೆಸಬೇಕು. ಜನರನ್ನ ಉಳಿದ ಹಣದಲ್ಲಿ ಹೇಗೆ ನಡೆಸಿಕೊಳ್ಳಲಿದೆ ಎಂದು ಊಹಿಸಿಕೊಳ್ಳಿ. ಆದರೆ ನಿಮ್ಮ ರಾಜ್ಯ ಬಜೆಟ್ 3ನೇ 1ರಷ್ಟು ಇದಕ್ಕೆ ಮೀಸಲಿಡಬೇಕು. ಇದು ಸಂಪೂರ್ಣ ಜನರನ್ನ ಮೋಸ ಮಾಡುವ ತಂತ್ರವಾಗಿದೆ. ಕರ್ನಾಟಕದ ಜನರು ಇದಕ್ಕೆ ಮರುಳಾಗಬೇಡಿ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments