Webdunia - Bharat's app for daily news and videos

Install App

ಕಾಂಗ್ರೆಸ್‌ ಜಗಳ ಬಿಟ್ಟರೆ ಇವತ್ತು ಏನೇನಿಲ್ಲ..!

geetha
ಶುಕ್ರವಾರ, 23 ಫೆಬ್ರವರಿ 2024 (18:43 IST)
ಬೆಂಗಳೂರು : ಬಿಜೆಪಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದರೆ, ಕಾಂಗ್ರೆಸ್‌ ನವರಿಗೆ ಅನುದಾನಕ್ಕೆ ಮನವಿ ಸಲ್ಲಿಸುವುದೂ ಸಹ ಬರುವುದಿಲ್ಲ. ವಿನಂತಿಯ ಧೋರಣೆ ಬಿಟ್ಟು ಉದ್ದಟತನದಿಂದ ಪತ್ರ ಬರೆದಿರುವುದು ಸರಿಯಲ್ಲ ಎಂದು ಬಿಜೆಪಿಯವರು ತಗಾದೆ ಹೂಡಿದರು.ತೆರಿಗೆ ಹಂಚಿಕೆ ಹಾಗೂ ಅನುದಾನ ವಿತರಣೆಯಲ್ಲಿ ಕೇಂದ್ರ ಸರ್ಕಾರದ ನಿಲುವುಗಳು ಸೋಮವಾರ ಬಿಜೆಪಿ ಹಾಗೂ ಕಾಂಗ್ರೆಸ್‌ ಶಾಸಕರ ನಡುವಿನ ತೀವ್ರ ಜಟಾಪಟಿಗೆ ಕಾರಣವಾಯಿತು.

ಬಿಜೆಪಿ ಶಾಸಕರು ಏನಿಲ್ಲ ಏನಿಲ್ಲ ಎಂದು ಹಾಡುತ್ತಾ ಸದನದ ಬಾವಿಯೊಳಗಿಳಿದು ಪ್ರತಿಭಟಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಯು.ಟಿ ಖಾದರ್‌ ನಿಮಗೆಲ್ಲಾ ಒಂದು ದಿನ ಪ್ರತಿಭಾ ಪ್ರದರ್ಶನ ಏರ್ಪಡಿಸುವುದಾಗಿ ಕಾಲೆಳೆದರು. ಗೊಂದಲದ ಸನ್ನಿವೇಶದಿಂದಾಗಿ ಅಧಿವೇಶನ ಸೋಮವಾರಕ್ಕೆ ಮುಂದೂಡಲ್ಪಟ್ಟಿತು. 

ಹಲವು ವಿಧೇಯಕಗಳನ್ನು ಅಂಗೀಕರಿಸುವ ಉದ್ದೇಶದಿಂದ ಪ್ರತಿಭಟನೆ ನಿಲ್ಲಿಸುವಂತೆ ಹಲವು ಬಾರಿ ಯು.ಟಿ. ಖಾದರ್‌ ಮನವಿ ಮಾಡಿಕೊಂಡರೂ ಬಿಜೆಪಿ ಶಾಸಕರು ಕಿವಿಗೊಡಲಿಲ್ಲ. ಎರಡೂ ಪಕ್ಷದವರು ಕೆಲಕಾಲ ಕಾಂಗ್ರೆಸ್‌ ಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎಂದು ಸತತವಾಗಿ ಕೂಗಾಟದಲ್ಲಿ ತೊಡಗಿದ್ದ ಕಾರಣ ಸಭೆಯಲ್ಲಿ ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿರಲಿಲ್ಲ. ಕೊನೆಗೆ, ಸಭಾಪತಿ ಯು.ಟಿ. ಖಾದರ್‌ ಸದನವನ್ನು ಸೋಮವಾರಕ್ಕೆ ಮುಂದೂಡಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments