Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯ ಬಂದ ಇಷ್ಟೂ ವರ್ಷಗಳಲ್ಲಿ ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸಿ ಕಾಂಗ್ರೆಸ್‌ ಆಡಳಿತ ನಡೆಸಿದೆ- ಪ್ರಧಾನಿ ನರೇಂದ್ರ ಮೋದಿ

ಸ್ವಾತಂತ್ರ್ಯ ಬಂದ ಇಷ್ಟೂ ವರ್ಷಗಳಲ್ಲಿ ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸಿ ಕಾಂಗ್ರೆಸ್‌ ಆಡಳಿತ ನಡೆಸಿದೆ- ಪ್ರಧಾನಿ ನರೇಂದ್ರ ಮೋದಿ
ರಾಯಚೂರು , ಸೋಮವಾರ, 7 ಮೇ 2018 (07:11 IST)
ರಾಯಚೂರು : ರಾಜ್ಯ ಸರ್ಕಾರ ಜಾರಿಮಾಡಿದ  ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರ ಸರ್ಕಾರದ  ಪಾಲಿದೆ ಎಂಬುದನ್ನು ಕಾಂಗ್ರೆಸ್ ಮುಚ್ಚಿಟ್ಟಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಯಚೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು,’ ಸ್ವಾತಂತ್ರ್ಯ ಬಂದ ಇಷ್ಟೂ ವರ್ಷಗಳಲ್ಲಿ ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸಿ ಕಾಂಗ್ರೆಸ್‌ ಆಡಳಿತ ನಡೆಸಿದೆ. ಸುಳ್ಳಿನ ಪ್ರಚಾರವೇ ಕಾಂಗ್ರೆಸ್‌ ಮಂತ್ರವಾಗಿದೆ. ವಿಚಿತ್ರವಾಗಿ ಸತತವಾಗಿ ಕಾಂಗ್ರೆಸ್ ಸುಳ್ಳು ಹೇಳುವ ಅಭಿಯಾನ ನಡೆಸುತ್ತಿದೆ. ಕಾಂಗ್ರೆಸ್ ಸಂಸತ್ ಅಧಿವೇಶನ ನಡೆಸಲು ಬಿಡ್ತಿಲ್ಲ. ಅವರಿಗೆ ಮೋದಿ ಕೆಲಸಗಳ ಬಗ್ಗೆ ಭಯ ಬಂದುಬಿಟ್ಟಿದೆ. ಈಗ ಕಾಂಗ್ರೆಸ್ ಪಕ್ಷವನ್ನು ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ