Publish Date: Wed, 20 May 2026 (09:58 IST)
Updated Date: Wed, 20 May 2026 (10:01 IST)
ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದ್ದು, ಸಮಸ್ಯೆ ಇತ್ಯರ್ಥಕ್ಕೆ ಡೆಡ್ ಲೈನ್ ಫಿಕ್ಸ್ ಆಗಿದೆ ಎನ್ನಲಾಗಿದೆ.
ಪಂಚ ರಾಜ್ಯಗಳ ಚುನಾವಣೆ ಬಳಿಕ ಕರ್ನಾಟಕ ಕಾಂಗ್ರೆಸ್ ನ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಈಗಾಗಲೇ ಡಿಕೆ ಶಿವಕುಮಾರ್ ಬೆಂಬಲಿಗರು ಹೇಳಿಕೆ ನೀಡುತ್ತಲೇ ಬಂದಿದ್ದಾರೆ.
ಇದೀಗ ಕೇಳಿಬರುತ್ತಿರುವ ಸುದ್ದಿಗಳ ಪ್ರಕಾರ ಇನ್ನು 3-4 ದಿನಗಳಲ್ಲೇ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಬುಲಾವ್ ನೀಡಲಿದೆ. ಮೇ 24 ರ ಬಳಿಕ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಹೀಗಾಗಿ ಇದಕ್ಕಿಂತ ಮೊದಲು ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಲಿದ್ದಾರೆ.
ಇದರ ನಡುವೆ ಸಿಎಂ ಮತ್ತು ಡಿಸಿಎಂ ಬಣದ ನಾಯಕರು ದೆಹಲಿಗೆ ಹಾರಲು ಸಜ್ಜಾಗಿದ್ದಾರೆ. ಇದಕ್ಕೆ ಮೊದಲು ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಆಪ್ತ ಬಣದ ನಾಯಕರು ಸಭೆ ನಡೆಸಿದ್ದಾರೆ. ಸಾಧನಾ ಸಮಾವೇಶದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಯಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ